ಬ್ರೇಕಿಂಗ್ ನ್ಯೂಸ್
11-02-22 11:00 pm HK Desk news ಕರಾವಳಿ
ಉಡುಪಿ, ಫೆ.11 : ಕರಾವಳಿಯಲ್ಲಿ ಹಿಜಾಬ್ ಸಂಘರ್ಷ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಉಡುಪಿ ಮತ್ತು ಮಂಗಳೂರು ನಗರದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದ್ದಾರೆ.
ಉಡುಪಿ ನಗರದ ಪ್ರಮುಖ ಭಾಗಗಳಲ್ಲಿ ಪೊಲೀಸರು ಮತ್ತು ಹೆಚ್ಚುವರಿ ರಿಸರ್ವ್ ಪಡೆಗಳು ಪಥ ಸಂಚಲನ ನಡೆಸಿದೆ. ಸಾರ್ವಜನಿಕರಲ್ಲಿ ಧೈರ್ಯ ಮತ್ತು ವಿದ್ರೋಹಿಗಳಿಗೆ ಭಯ ಮೂಡಿಸಲು ಪಥ ಸಂಚಲನ ನಡೆಸಿದ್ದು ಜಾಗೃತಿ ಮೂಡಿಸುವ ಯತ್ನ ನಡೆದಿದೆ.


ಉಡುಪಿ ತಾಲೂಕಿನ ವಿವಿಧ ಠಾಣೆಯ 238ಕ್ಕೂ ಹೆಚ್ಚು ಪೊಲೀಸರು ರೂಟ್ ಮಾರ್ಚ್ ನಲ್ಲಿ ಭಾಗವಹಿಸಿದ್ದಾರೆ. ಅಲ್ಲದೆ, 50 ಮಂದಿ ಪೊಲೀಸ್ ಅಧಿಕಾರಿಗಳು ಕೂಡ ಭಾಗಿಯಾಗಿದ್ದರು. ಸೋಮವಾರದಿಂದ ಹತ್ತನೇ ತರಗತಿ ವರೆಗೆ ಶಾಲೆ ನಡೆಯಲಿದ್ದು ಯಾವುದೇ ಕಾರಣಕ್ಕೂ ಕೇಸರಿ ಅಥವಾ ಹಿಜಾಬ್ ಕಾಣಿಸದಂತೆ ರಾಜ್ಯ ಸರಕಾರ ಮುನ್ಸೂಚನೆ ನೀಡಿದೆ. ಇದಕ್ಕಾಗಿ ಶಾಲೆಯ ಆವರಣದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ.

ಮಂಗಳೂರು ನಗರ ಹೊರವಲಯದ ಸುರತ್ಕಲ್, ಕಾಟಿಪಳ್ಳದಲ್ಲಿಯೂ ಶುಕ್ರವಾರ ಸಂಜೆ ಪೊಲೀಸರು ಮತ್ತು ಆರ್ ಎಎಫ್ ಪಡೆ ಪಥ ಸಂಚಲನ ನಡೆಸಿದ್ದು ಆಮೂಲಕ ಸೂಕ್ಷ್ಮ ಪ್ರದೇಶಗಳಲ್ಲಿ ವಿದ್ರೋಹಿಗಳಿಗೆ ಎಚ್ಚರಿಕೆ ರವಾನಿಸಿದೆ.


ಒಂದು ಬೆಟಾಲಿಯನ್ ಆರ್ ಎಎಫ್ ಪಡೆ ಆಗಮನ
ಮಂಗಳೂರು, ಉಡುಪಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಲ್ಲಿ ಆರ್ ಎಎಫ್ ಒಂದು ಬೆಟಾಲಿಯನನ್ನು ಕರೆಸಿಕೊಳ್ಳಲಾಗಿದೆ. ಸದ್ಯಕ್ಕೆ 70 ಮಂದಿ ಮಂಗಳೂರಿಗೆ ಆಗಮಿಸಿದ್ದು ಅವರನ್ನು ಪಣಂಬೂರಿನಲ್ಲಿ ಇರಿಸಲಾಗುವುದು. ಇನ್ನೂ 60 ಮಂದಿ ಶನಿವಾರ ಬರಲಿದ್ದಾರೆ. ಅಹಿತಕರ ಘಟನಾ ಸ್ಥಳಕ್ಕೆ ಇಲ್ಲಿಂದಲೇ ತೆರಳಲಿದ್ದಾರೆ ಎಂದು ಮಂಗಳೂರು ನಗರ ಡಿಸಿಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
Security forces are holding a flag march in Udupi, the epicentre of pro and anti-hijab protests in the state. This comes after violent protests and stone-pelting over a government decision barring Muslim students from attending classes wearing hijab. Karnataka Police and paramilitary forces are holding the march as tense calm prevails throughout the state. Chief Minister Bommai had earlier appealed to all stakeholders involved to maintain calm.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am