ಬ್ರೇಕಿಂಗ್ ನ್ಯೂಸ್
12-02-22 01:35 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.12 : ಮರಳು ಮಾಫಿಯಾದಲ್ಲಿ ಕಮಿಷನ್ ಪಡೆದ ಆರೋಪದಲ್ಲಿ ಆಣೆ ಪ್ರಮಾಣದ ಸವಾಲು ಸ್ವೀಕರಿಸಿದ್ದ ಶಾಸಕ ಹರತಾಳು ಹಾಲಪ್ಪ ತಮ್ಮ ಬೆಂಬಲಿಗರೊಂದಿಗೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿದ್ದಾರೆ.
ಆರೋಪ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹರತಾಳು ಹಾಲಪ್ಪ ಮತ್ತು ಬೇಳೂರು ಗೋಪಾಲಕೃಷ್ಣ ಇಬ್ಬರು ಕೂಡ ಇಂದು ಧರ್ಮಸ್ಥಳಕ್ಕೆ ಬರುತ್ತಾರೆ ಎನ್ನಲಾಗಿತ್ತು. ಇಂದು ಬೆಳಗ್ಗೆ ಶಾಸಕ ಹರತಾಳು ಹಾಲಪ್ಪ ಮಾತ್ರ ಧರ್ಮಸ್ಥಳಕ್ಕೆ ಬಂದಿದ್ದು ಮಂಜುನಾಥನ ದರ್ಶನ ಪಡೆದು ಆಣೆ ಪ್ರಮಾಣ ಮಾಡಿದ್ದಾರೆ. ಬೆಂಬಲಿಗರ ಜೊತೆ ದೇವರ ದರ್ಶನ ಪಡೆದು ದೇವರ ಎದುರೇ ಆಣೆ ಮಾಡಿದ್ದಾಗಿ ಶಾಸಕ ಹಾಲಪ್ಪ ಹೇಳಿಕೊಂಡಿದ್ದಾರೆ. ಆದರೆ ಬೇಳೂರು ಗೋಪಾಲಕೃಷ್ಣ ದೇವಸ್ಥಾನಕ್ಕೆ ಬರದೆ ದೂರ ಉಳಿದಿದ್ದಾರೆ.

ಮರಳು ಮಾಫಿಯಾದಿಂದ ತಾನಾಗಲಿ, ತನ್ನ ಸಂಗಡಿಗರಾಗಲಿ ಕಮಿಷನ್ ಪಡೆದಿಲ್ಲ. ಆದರೆ ಬೇಳೂರು ಗೋಪಾಲಕೃಷ್ಣ ವಿನಾಕಾರಣ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆಬಳಿಕ ನನ್ನ ಜೊತೆಗಿರುವ ವಿನಾಯಕ ರಾವ್ ಮತ್ತು ಬಿ.ಟಿ ರವೀಂದ್ರ ಬಗ್ಗೆ ಆರೋಪ ಮಾಡಿದ್ದರು. ಈಗ ನಾವು ಎಲ್ಲ ಜೊತೆಗೆ ಬಂದು ಆಣೆ ಮಾಡಿ ಹೇಳಿದ್ದೇವೆ. ಮಾಜಿ ಶಾಸಕರ ಸವಾಲನ್ನು ಸ್ವೀಕರಿಸಿ ಫೆ.12 ರಂದು ಧರ್ಮಸ್ಥಳಕ್ಕೆ ತೆರಳುತ್ತಿರುವುದಾಗಿ ಮಾಧ್ಯಮದಲ್ಲಿ ಪ್ರಕಟಣೆ ಕೊಟ್ಟಿದ್ದೆ. ಆದರೆ ನನಗೆ ಆಣೆ ಪ್ರಮಾಣದ ಸವಾಲು ಹಾಕಿ ಅವರು ಈಗ ಪಲಾಯನ ಮಾಡುತ್ತಿದ್ದಾರೆ. ಈಗ ಗೋವಾ ಚುನಾವಣೆಯ ಸುಬೂಬು ಹೇಳ್ತಾ ಇದ್ದಾರೆ. ಬೇಳೂರು ಗೋಪಾಲಕೃಷ್ಣ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ನನಗೆ ಸವಾಲು ಹಾಕಿದವರು ಈಗ ಧರ್ಮಸ್ಥಳಕ್ಕೆ ಬರಲಿ. ದೇವರೆದುರು ನಾನು ಆಣೆ ಪ್ರಮಾಣ ಮಾಡಿದ್ದೇನೆ. ಅವರೂ ಬಂದು ಮಾಡಲಿ ಎಂದು ಹರತಾಳು ಹಾಲಪ್ಪ ಹೇಳಿದ್ದಾರೆ.
Sand Commision, Halappa Harathalu visits Dharmasthala temple by taking oath as he challenged of doing it.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm