ಬ್ರೇಕಿಂಗ್ ನ್ಯೂಸ್
13-02-22 07:42 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.13 : ಮಾನಸಿಕ ಖಿನ್ನತೆಗೊಳಗಾಗಿದ್ದ ಯುವಕನೋರ್ವ ಸೋಮೇಶ್ವರ ಕಡಲಿಗೆ ಜಿಗಿದು ಆತ್ಮ ಹತ್ಯೆಗೈದ ಘಟನೆ ಭಾನುವಾರ ನಡೆದಿದೆ.
ಉಚ್ಚಿಲ ಸಂಕೊಳಿಗೆ ನಿವಾಸಿ ಭಾಸ್ಕರ್ ನಾಯಕ್ (32) ಮೃತ ಯುವಕ. ಗೆಟ್ ಅಪ್ ಸಾಫ್ಟ್ ಡ್ರಿಂಕ್ಸ್ ಸಂಸ್ಥೆಯಲ್ಲಿ ವಾಹನ ಚಾಲಕನಾಗಿದ್ದ ಭಾಸ್ಕರ್ ಶನಿವಾರ ರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದ. ಭಾಸ್ಕರನಿಗೆ ಆತನ ಅಣ್ಣ ಲೋಕೇಶ್ ನಾಯಕ್ ತಾನು ಬ್ಯಾಂಕಲ್ಲಿ ಅಡವಿಟ್ಟ ಚಿನ್ನವನ್ನು ಬಿಡಿಸಿ ತರಲು 20,000 ರೂಪಾಯಿಗಳನ್ನ ನೀಡಿದ್ದನಂತೆ. ಆದರೆ ರಾತ್ರಿಯಿಡೀ ಭಾಸ್ಕರ್ ಸುಳಿವೇ ಇಲ್ಲದ ಕಾರಣ ಮನೆ ಮಂದಿ ಗಾಬರಿಗೊಂಡು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಬೆಳಗ್ಗೆ ಮನೆಯ ಮಂಚದ ದಿಂಬಿನ ಅಡಿಯಲ್ಲಿ 20,000 ರೂಪಾಯಿ ಪತ್ತೆಯಾಗಿದೆ.


ಇಂದು ಸಂಜೆ ಭಾಸ್ಕರ್ ಮೃತದೇಹ ಸೋಮೇಶ್ವರ ರುದ್ರಪಾದೆಯ ಕಡಲ ತೀರದಲ್ಲಿ ತೇಲುತ್ತಿದ್ದು ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಅವರು ಮೃತದೇಹವನ್ನ ಎಳೆದು ತೀರಕ್ಕೆ ಹಾಕಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಭಾಸ್ಕರ್ ಅವಿವಾಹಿತರಾಗಿದ್ದು ತಾಯಿ, ಅಣ್ಣನನ್ನ ಅಗಲಿದ್ದಾರೆ. ಆತ್ಮಹತ್ಯೆಗೇನು ಕಾರಣ ಅನ್ನೋದು ತಿಳಿದುಬಂದಿಲ್ಲ. ಕೆಲವು ಸಮಯದಿಂದ ಮಾನಸಿಕವಾಗಿ ಖಿನ್ನನಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore 32 year old man commits suicide by drowning in sea at Someshwara, depression suspected. The deceased has been identified as Bhaskar Nayak a resident of Uchila.
26-12-25 09:38 pm
HK News Desk
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
26-12-25 09:41 pm
HK News Desk
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
26-12-25 11:21 pm
Bangalore Correspondent
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ; ಕೋಮ...
26-12-25 03:31 pm
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm