ಬ್ರೇಕಿಂಗ್ ನ್ಯೂಸ್
13-02-22 07:42 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.13 : ಮಾನಸಿಕ ಖಿನ್ನತೆಗೊಳಗಾಗಿದ್ದ ಯುವಕನೋರ್ವ ಸೋಮೇಶ್ವರ ಕಡಲಿಗೆ ಜಿಗಿದು ಆತ್ಮ ಹತ್ಯೆಗೈದ ಘಟನೆ ಭಾನುವಾರ ನಡೆದಿದೆ.
ಉಚ್ಚಿಲ ಸಂಕೊಳಿಗೆ ನಿವಾಸಿ ಭಾಸ್ಕರ್ ನಾಯಕ್ (32) ಮೃತ ಯುವಕ. ಗೆಟ್ ಅಪ್ ಸಾಫ್ಟ್ ಡ್ರಿಂಕ್ಸ್ ಸಂಸ್ಥೆಯಲ್ಲಿ ವಾಹನ ಚಾಲಕನಾಗಿದ್ದ ಭಾಸ್ಕರ್ ಶನಿವಾರ ರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದ. ಭಾಸ್ಕರನಿಗೆ ಆತನ ಅಣ್ಣ ಲೋಕೇಶ್ ನಾಯಕ್ ತಾನು ಬ್ಯಾಂಕಲ್ಲಿ ಅಡವಿಟ್ಟ ಚಿನ್ನವನ್ನು ಬಿಡಿಸಿ ತರಲು 20,000 ರೂಪಾಯಿಗಳನ್ನ ನೀಡಿದ್ದನಂತೆ. ಆದರೆ ರಾತ್ರಿಯಿಡೀ ಭಾಸ್ಕರ್ ಸುಳಿವೇ ಇಲ್ಲದ ಕಾರಣ ಮನೆ ಮಂದಿ ಗಾಬರಿಗೊಂಡು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಬೆಳಗ್ಗೆ ಮನೆಯ ಮಂಚದ ದಿಂಬಿನ ಅಡಿಯಲ್ಲಿ 20,000 ರೂಪಾಯಿ ಪತ್ತೆಯಾಗಿದೆ.


ಇಂದು ಸಂಜೆ ಭಾಸ್ಕರ್ ಮೃತದೇಹ ಸೋಮೇಶ್ವರ ರುದ್ರಪಾದೆಯ ಕಡಲ ತೀರದಲ್ಲಿ ತೇಲುತ್ತಿದ್ದು ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಅವರು ಮೃತದೇಹವನ್ನ ಎಳೆದು ತೀರಕ್ಕೆ ಹಾಕಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಭಾಸ್ಕರ್ ಅವಿವಾಹಿತರಾಗಿದ್ದು ತಾಯಿ, ಅಣ್ಣನನ್ನ ಅಗಲಿದ್ದಾರೆ. ಆತ್ಮಹತ್ಯೆಗೇನು ಕಾರಣ ಅನ್ನೋದು ತಿಳಿದುಬಂದಿಲ್ಲ. ಕೆಲವು ಸಮಯದಿಂದ ಮಾನಸಿಕವಾಗಿ ಖಿನ್ನನಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore 32 year old man commits suicide by drowning in sea at Someshwara, depression suspected. The deceased has been identified as Bhaskar Nayak a resident of Uchila.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm