ಬ್ರೇಕಿಂಗ್ ನ್ಯೂಸ್
13-02-22 10:31 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಕರಾವಳಿಯ ಅತ್ಯಂತ ಪ್ರಸಿದ್ದ ಹಾಗೂ ಪುರಾತನ ದೇವಸ್ಥಾನಗಳಲ್ಲೊಂದಾದ ಬಂಟ್ವಾಳ ತಾಲೂಕಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಆಸುಪಾಸಿನಲ್ಲಿ ಮೂರು ಕಡೆ ನಡೆಯುತ್ತಿದ್ದ ಕಲ್ಲು ಗಣಿಗಾರಿಕೆಯನ್ನು ಸ್ಥಳೀಯರ ದೂರಿನ ಹಿನ್ನೆಲೆಯಲ್ಲಿ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ಇಂಧನ, ಕನ್ನಡ ಹಾಗೂ ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ಕಾವಳ ಮೂಡೂರು ಗ್ರಾಮದ ಸರ್ವೆ ನಂ. 164/2ಪಿ1 ರಲ್ಲಿ 0.50 ಎಕ್ರೆ ಮತ್ತು 172/2ಪಿ1 ರಲ್ಲಿ 0.50 ಎಕ್ರೆ ಒಟ್ಟು 1.00 ಎಕ್ರೆ ಪ್ರದೇಶದಲ್ಲಿ 2007 ರಿಂದ ಗಣಿಗಾರಿಕೆ ನಡೆಯುತ್ತಿದ್ದು, ತನ್ನ ಪರವಾನಿಗೆಯ ವ್ಯಾಪ್ತಿ ಮೀರಿ ಸುಮಾರು 3.28 ಎಕ್ರೆ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡಿರುವ ಹಿನ್ನೆಲೆಯಲ್ಲಿ ರೂ. 8,12,87,198 ದಂಡ ಪಾವತಿಸುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸೂಚಿಸಿದ್ದು ದಂಡ ಪಾವತಿಸದ ಕಾರಣ ಸದ್ರಿ ಗಣಿಗಾರಿಕೆಯನ್ನು 2021ರ ಡಿಸೆಂಬರ್ ತಿಂಗಳಲ್ಲಿ ಸ್ಥಗಿತಗೊಳಿಸಲಾಗಿದೆ ಹಾಗೂ ಅನಧಿಕೃತ ಗಣಿಗಾರಿಕೆ ನಡೆಸಿರುವ ಮಾಲೀಕರ ವಿರುದ್ಧ ಬಂಟ್ವಾಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿದೆ.
ಕಾವಳ ಪಡೂರು ಗ್ರಾಮದ ಸ.ನಂ 121/2ಪಿ1 ರಲ್ಲಿ ಒಂದು ಎಕ್ರೆ ವಿಸ್ತೀರ್ಣದಲ್ಲಿ 2016 ರಿಂದ ಆರಂಭಗೊಂಡಿದ್ದ ಗಣಿಗಾರಿಕೆ 20 ವರ್ಷಗಳ ಅವಧಿಗೆ ಪರವಾನಿಗೆ ಇದ್ದರೂ ಕೂಡ ಗುತ್ತಿಗೆದಾರರು ಗೋಮಾಳ ಜಾಗವನ್ನು ಅತಿಕ್ರಮಿಸಿ ಗಣಿಗಾರಿಕೆ ನಡೆಸುತ್ತಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಸದ್ರಿ ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ. ಹಾಗೂ ಸ.ನಂ 122/3ಪಿ1 ರಲ್ಲಿ 1 ಎಕ್ರೆ ಜಮೀನಿನಲ್ಲಿ 2015 ರಿಂದ ಆರಂಭಗೊಂಡಿದ್ದ ಗಣಿಗಾರಿಕೆಯನ್ನು ಅದರ ಗುತ್ತಿಗೆದಾರರು ಮೃತಪಟ್ಟಿದ್ದು ಅದೇ ಗಣಿಗಾರಿಕೆ ಪ್ರದೇಶದಲ್ಲಿ ಅನಧಿಕೃತವಾಗಿ ಬೇರೆ ವ್ಯಕ್ತಿ ಗಣಿಗಾರಿಕೆ ಮಾಡುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಈ ಗಣಿಗಾರಿಕೆಯನ್ನೂ ಸ್ಥಗಿತಗೊಳಿಸಲಾಗಿದೆ.
ದೇವಸ್ಥಾನದ ಆಸುಪಾಸು ಕಾರ್ಯಚರಿಸುತ್ತಿದ್ದ ಮೂರು ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಲಾಗಿದ್ದು ಸಾವಿರಾರು ವರ್ಷಗಳ ಇತಿಹಾಸವಿರುವ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಯಾವುದೇ ಧಕ್ಕೆ ಬಾರದ ಹಾಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಗಣಿಗಾರಿಕೆ ಚಟುವಟಿಕೆ ನಡೆಸದಂತೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ.
ದೇವಸ್ಥಾನದ ಪರಿಸರವನ್ನು ಅತೀ ಸೂಕ್ಷ್ಮ ವಲಯ ಎಂದು ಘೋಷಣೆ ಮಾಡುವ ಬಗ್ಗೆ ಈಗಾಗಲೇ ಸರಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಭಕ್ತಾದಿಗಳ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಾದ ಸುನಿಲ್ ಕುಮಾರ್ ತಿಳಿಸಿದ್ದಾರೆ.
Illegal quarrying at Karinja temple in Puttur, Sunil Kumar orders to stop it immediately.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am