ಬ್ರೇಕಿಂಗ್ ನ್ಯೂಸ್
16-02-22 09:05 pm Mangalore Correspondent ಕರಾವಳಿ
ಮಂಗಳೂರು, ಫೆ.16 : ಗಡಿನಾಡು ಕಾಸರಗೋಡು ಜಿಲ್ಲೆಯ ಕುಗ್ರಾಮದಲ್ಲಿ ಬೆಳೆದ ಮುಸ್ಲಿಂ ಸಮುದಾಯದ ಹುಡುಗಿಯೊಬ್ಬಳು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವ ವಿದ್ಯಾನಿಲಯದಲ್ಲಿ ಎಂಡಿಎಸ್ ವಿಭಾಗದಲ್ಲಿ ಮೊದಲ ರ್ಯಾಂಕಿನೊಂದಿಗೆ ಚಿನ್ನದ ಪದಕದ ಗಳಿಸಿದ್ದು ಮಹತ್ತರ ಸಾಧನೆ ಮಾಡಿದ್ದಾಳೆ.
ಕಾಸರಗೋಡು ಜಿಲ್ಲೆಯ ಪೈವಳಿಕೆ ಬಳಿಯ ಕಾಡೂರು ಎಂಬ ಕುಗ್ರಾಮದ ನಿವಾಸಿಯಾಗಿರುವ ಡಾ. ಸೆಕೀಬಾ ಅಲಿ ಕಾಡೂರು ರಾಜೀವ ಗಾಂಧಿ ವಿವಿಯ ಕನ್ಸರ್ವೇಟಿವ್ ಡೆಂಟಿಸ್ಟ್ರಿ ಎಂಡ್ ಎಂಡೋಡೋಂಟಿಕ್ಸ್ ವಿಷಯದಲ್ಲಿ ಎಂಡಿಎಸ್ ಪೂರೈಸಿದ್ದು ಮೊದಲ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಮೆಡಿಕಲ್ ಕಾಲೇಜಿನಲ್ಲಿ ಬಿಡಿಎಸ್ ಅಧ್ಯಯನ ನಡೆಸಿದ್ದ ಸೆಕೀಬಾ, ಹಾಸನದ ಹಾಸನಾಂಬ ಡೆಂಟಲ್ ಕಾಲೇಜಿನಲ್ಲಿ ಎಂಡಿಎಸ್ ವಿದ್ಯಾರ್ಥಿನಿಯಾಗಿದ್ದರು.
ಈಕೆ ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡೂರಿನ ಮೊಹಮ್ಮದ್ ಅಲಿ ಮತ್ತು ಜೊಹರಾ ಅಲಿ ದಂಪತಿಯ ಪುತ್ರಿ. ಹುಟ್ಟೂರು ಕಾಡೂರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಆರಂಭಿಸಿದ್ದ ಸೆಕೀಬಾ, ಗಡಿಭಾಗದ ಕುರುಡಪದವು ಪ್ರೌಢಶಾಲೆಯಲ್ಲಿ ಹೈಸ್ಕೂಲ್, ಆನಂತರ ವಿಟ್ಲದ ಪಿಯು ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದು ಸರಕಾರಿ ಕೋಟಾದಲ್ಲಿ ಮೆಡಿಕಲ್ ಸೀಟು ಗಿಟ್ಟಿಸಿದ್ದರು. ಪ್ರಾಥಮಿಕ ಮತ್ತು ಪ್ರೌಢಶಾಲೆಯನ್ನು ಕನ್ನಡ ಮಾಧ್ಯಮದಲ್ಲಿ ಕಲಿತ ಹೆಣ್ಮಗಳು ಉನ್ನತ ಮಟ್ಟದ ಸಾಧನೆ ಮಾಡಿದ್ದು ಗಮನಾರ್ಹ.
ಅಂದಹಾಗೆ, ಕರಾವಳಿಯ ಮುಸ್ಲಿಂ ಸಮುದಾಯದ ಹುಡುಗಿಯೊಬ್ಬಳು ವೈದ್ಯಕೀಯ ಕ್ಷೇತ್ರದಲ್ಲಿ ಗೋಲ್ಡ್ ಮೆಡಲ್ ಸಾಧನೆ ಮಾಡಿದ್ದು ಇದೇ ಮೊದಲು ಎನ್ನಲಾಗುತ್ತಿದೆ. ಈಕೆಯ ಸಾಧನೆಗೆ ಹಾಸನಾಂಬ ಕಾಲೇಜಿನ ಪ್ರಾಂಶುಪಾಲರು, ಸಿಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕುಟುಂಬಸ್ಥರು ಸಂತಸಗೊಂಡಿದ್ದಾರೆ.
Kasargod village girl Dr Sakiba Ali bags gold medal in MDS from RHGUS.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm