ಬ್ರೇಕಿಂಗ್ ನ್ಯೂಸ್
16-02-22 10:40 pm Mangalore Correspondent ಕರಾವಳಿ
ಮಂಗಳೂರು, ಫೆ.16 : ಹಿಜಾಬ್ ಅವರವರ ಆಯ್ಕೆ. ಬಲವಂತವಾಗಿ ಹಿಜಾಬ್ ಅನ್ನು ತೆಗೆಸುವುದು ಸರಕಾರಿ ಪ್ರಾಯೋಜಿತ ಕ್ರಿಮಿನಲ್ ಆ್ಯಕ್ಟಿವಿಟಿ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಹೈಕೋರ್ಟಿನ ಮಧ್ಯಂತರ ಆದೇಶ ಸರಕಾರಿ ಪ.ಪೂ. ಕಾಲೇಜುಗಳಲ್ಲಿ ಎಲ್ಲಿ ಸಮವಸ್ತ್ರ ಕಡ್ಡಾಯ ಇದೆಯೋ ಅಲ್ಲಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಕೋರ್ಟ್ ಆದೇಶವನ್ನು ಸರಿಯಾಗಿ ಅರ್ಥೈಸದೆ ರಾಜ್ಯದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಹಿಜಾಬ್ ಅನ್ನು ಬಲವಂತವಾಗಿ ತೆಗೆಸಲಾಗುತ್ತದೆ. ಹಿಜಾಬ್ ಧರಿಸಿರುವುವವರನ್ನು ಬೆನ್ನಟ್ಟಿ ಕಿರುಕುಳ ನೀಡಲಾಗುತ್ತಿದೆ. ಶಿಕ್ಷಣ ಇಲಾಖೆ, ಗೃಹ ಇಲಾಖೆಗಳು ಕೋರ್ಟ್ ಆದೇಶ ಪಾಲನೆ ಮಾಡಬೇಕು. ಆದೇಶ ಅನ್ವಯವಾಗದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ತೆಗೆಯಲೆತ್ನಿಸದರೆ ಅಂತಹ ಅಧಿಕಾರಿಗಳು ಶಿಕ್ಷಕರ ಮೇಲೆ ಕ್ರಮ ಜರುಗಿಸಬೇಕು ಎಂದು ಹೇಳಿದರು.
ಕಾಂಗ್ರೆಸ್ ನವರು ತಮ್ಮ ಇಬ್ಬಂದಿ ನೀತಿಯನ್ನು ಸರಿಪಡಿಸಲಿ. ಮುಸ್ಲಿಮರ ಓಟ್ ಬೇಕು, ಅವರ ಜ್ವಲಂತ ಸಮಸ್ಯೆಯ ಬಗ್ಗೆ ಕಾಳಜಿಯಿಲ್ಲ. ಡಿಕೆಶಿ ಯಾವುದೇ ರೀತಿ ಹಿಜಾಬ್ ಬಗ್ಗೆ ಮಾತನಾಡುವುದಿಲ್ಲ. ಅವರು ಸಾಫ್ಟ್ ಹಿಂದುತ್ವ ಅಜೆಂಡಾ ತೆಗೆದುಕೊಂಡು ತಮ್ಮ ಪಕ್ಷದ ಸಮಾಧಿಯನ್ನು ತಾವೇ ಮಾಡಿಕೊಳ್ಳುತ್ತಿದ್ದಾರೆ. ಭಯದ ವಾತಾವರಣವನ್ನು ತೆಗೆಯುವಂತೆ ಮಾಡಬೇಕು. ಹಿಜಾಬ್ ಮೂಲಭೂತ ಹಕ್ಕು, ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆ. ಪ್ರತಿಪಕ್ಷ ತಮ್ಮ ಬದ್ಧತೆ ಪ್ರದರ್ಶಿಸಲಿ. ಮೊದಲು ಹಿಜಾಬ್ ಬಗ್ಗೆ ಖಚಿತ ಮಾತು ಹೇಳಲಿ ಎಂದರು ಅಬ್ದುಲ್ ಮಜೀದ್.
ವಿಧಾನ ಸೌಧದದಲ್ಲಿ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲಿ. ಆದ್ದರಿಂದ ಕಾಂಗ್ರೆಸ್ ನ, ಜೆಡಿಎಸ್ ನ ಬದ್ಧತೆಯನ್ನು ಪ್ರಶ್ನಿಸಬೇಕಾಗುತ್ತದೆ. ಇದಕ್ಕೆ ಸೌಹಾರ್ದಯುತ ಪರಿಹಾರವನ್ನು ಪಡೆಯಬೇಕು. ಮಾಧ್ಯಮಗಳು ಸೇರಿದಂತೆ ರಾಜಕೀಯ ಪಕ್ಷಗಳು ತಮ್ಮ ಕರ್ತವ್ಯ ಪಾಲಿಸಬೇಕು ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಭಾಸ್ಕರ ಪ್ರಸಾದ್ ಹೇಳಿದ್ದಾರೆ.
ಹಿಜಾಬ್ ನಿಷೇಧಿಸಿದ್ದು ಓರ್ವ ಅಜ್ಞಾನಿ ಪ್ರಾಂಶುಪಾಲ. ಯಾವುದೇ ಧಾರ್ಮಿಕ ಗುರುತುಗಳನ್ನು ಧರಿಸಿ ಶಾಲೆಗೆ ಹೋಗಬಾರದು. ಹಾಗಾದರೆ ನಾಮ, ಜನಿವಾರ, ಶಾಲೆಯಲ್ಲಿನ ಗಣೇಶ, ಸರಸ್ವತಿ ಫೋಟೋಗಳಿಗೆ ಅನ್ವಯ ಆಗುದಿಲ್ಲವೇ ಎಂದು ಪ್ರಶ್ನೆ ಮಾಡಿದರು. ಈ ವಿವಾದದ ಹಿಂದೆ ಎಸ್ಡಿಪಿಐ ಇದೆಯೆಂಬ ಆರೋಪದ ಬಗ್ಗೆ, ಎಸ್ ಡಿಪಿಐಗೆ ಆ ರೀತಿಯ ಗತಿಗೇಡು ಬಂದಿಲ್ಲ. ಮಕ್ಕಳನ್ನು ರಾಜಕೀಯ ದಾಳಕ್ಕೆ ಬಳಸುವ ಕೆಲಸ ಯಾವತ್ತೂ ಮಾಡೋದಿಲ್ಲ. ಈ ಬಗ್ಗೆ ಯಾರು ಬೇಕಾದ್ರು ಬಹಿರಂಗ ಚರ್ಚೆಗೆ ಬರಲಿ. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಎಲ್ಲರು ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು ಭಾಸ್ಕರ್.
On a day when colleges in the state reopened after being shut for over a week amidst the Hijab versus saffron shawl issue, the Social Democratic Party of India (SDPI) alleged that the whole issue was a 'criminal activity sponsored by the BJP government.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm