ಬ್ರೇಕಿಂಗ್ ನ್ಯೂಸ್
17-02-22 05:41 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.17 : ತೊಕ್ಕೊಟ್ಟಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಯುವಕನೋರ್ವ ಯುವತಿಗೆ ಚುಡಾಯಿಸಿದ ಪರಿಣಾಮ ನೆರೆದಿದ್ದ ಯುವಕರ ನಡುವೆ ಹೊಯ್ ಕೈ ನಡೆದು ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆಗೈದಿದ್ದು ರೊಚ್ಚಿಗೆದ್ದ ಪೊಲೀಸರು ಹಲ್ಲೆಕೋರರಿಗೆ ಅಟ್ಟಾಡಿಸಿ ಹೊಡೆದ ಘಟನೆ ನಡೆದಿದೆ.
ತೊಕ್ಕೊಟ್ಟು ಒಳಪೇಟೆಯ ಕ್ಲಿಕ್ ಸಭಾಂಗಣದಲ್ಲಿ ಇಂದು ಮದುವೆ ಸಮಾರಂಭ ನಡೆದಿತ್ತು. ಕೋಟೆಕಾರು ಮಾಡೂರಿನ ವಧು ಮತ್ತು ಕೇರಳದ ಕಾಸರಗೋಡಿನ ವರನಿಗೆ ಮದುವೆ ನಡೆದಿತ್ತು. ಮದುವೆ ಸಮಾರಂಭದಲ್ಲಿ ವರನ ಕಡೆಯ ಯುವಕನೋರ್ವ ವಧುವಿನ ಕಡೆಯ ಯುವತಿಯ ಹಿಂದೆ ಬಿದ್ದು ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಿತನಾದ ಯುವತಿಯ ಸಹೋದರ ಚುಡಾಯಿಸಿದವನಿಗೆ ಹಲ್ಲೆ ನಡೆಸಿದ್ದಾನೆ.



ಪರಿಣಾಮ ಪರಸ್ಪರ ಯುವಕರ ಗುಂಪಿನ ನಡುವೆ ಬೀದಿ ಕಾಳಗವೇ ನಡೆದಿದೆ. ಸ್ಥಳದಲ್ಲಿ ಉಳ್ಳಾಲ ಉರೂಸ್ ಬಂದೋಬಸ್ತಲ್ಲಿದ್ದ ಪೊಲೀಸರೋರ್ವರಿಗೆ ಉದ್ರಿಕ್ತರು ಕುತ್ತಿಗೆ ಹಿಚುಕಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿ ಬಂದೋಬಸ್ತಲ್ಲಿದ್ದ ಇತರ ಪೊಲೀಸರು ಸೇರಿ ಹಲ್ಲೆಕೋರರನ್ನ ಅಟ್ಟಾಡಿಸಿ ಹೊಡೆದು ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
Mangalore ullal Police thrash youths for teasing girls at wedding place. Three taken to custody. It is also said that the police was assaulted by the youths. The youths are said to be from Kasargod.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am