ಬ್ರೇಕಿಂಗ್ ನ್ಯೂಸ್
17-02-22 07:05 pm Mangalore Correspondent ಕರಾವಳಿ
ಮಂಗಳೂರು, ಫೆ.17 : ರಾಜ್ಯದಲ್ಲಿ ಹಿಂದು ದೇಗುಲಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುತುವರ್ಜಿಯನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಹಿಂದು ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವಂತೆ ಮತ್ತು ಎ ಗ್ರೇಡ್ ದೇವಾಲಯಗಳ ಅಧೀನದಲ್ಲಿ ಗೋಶಾಲೆಗಳನ್ನು ತೆರೆಯಲು ಆದೇಶ ಹೊರಡಿಸುವಂತೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಹಿಂದು ದೇವಾಲಯಗಳನ್ನು ಸರ್ಕಾರದ ಆಡಳಿತದಿಂದ ಮುಕ್ತಗೊಳಿಸುವ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಈ ಪ್ರಕ್ರಿಯೆ ಜರುಗಿಸುವ ಸಂದರ್ಭದಲ್ಲಿ ಎ ಗ್ರೇಡ್ ದೇವಸ್ಥಾನಗಳ ಅನುದಾನದಿಂದ ಪ್ರತ್ಯೇಕ ಗೋಶಾಲೆ ತೆರೆಯಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಎ ಗ್ರೇಡ್ ದೇವಸ್ಥಾನದ ಆಡಳಿತ ಮಂಡಳಿಗಳ ವತಿಯಿಂದಲೇ ಗೋ ಶಾಲೆಗಳನ್ನು ನಿರ್ವಹಿಸಲು ಆದೇಶದಲ್ಲಿ ಉಲ್ಲೇಖಿಸಬೇಕು. ಹೀಗೆ ಮಾಡಿದಲ್ಲಿ ಗೋವುಗಳ ಕಳ್ಳತನ, ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬೀಳಲಿದೆ.
ಇದರಿಂದ ಗೋಮಾತೆಗೂ ರಕ್ಷಣೆ ಕೊಟ್ಟಂತಾಗುತ್ತದೆ. ಇದಲ್ಲದೆ, ಗೋವಿನ ಸಂತತಿಯೂ ಹೆಚ್ಚಲಿದ್ದು , ಆಯಾ ಜಿಲ್ಲೆಯಲ್ಲಿ ಗೋವುಗಳನ್ನು ಸಾಕಲು ಸಾಧ್ಯವಾಗದವರು ಕಟುಕರಿಗೆ ಕೊಡುವ ಬದಲು ಇಂತಹ ಎ ಗ್ರೇಡ್ ದೇವಸ್ಥಾನಗಳ ಗೋಶಾಲೆಗಳಿಗೆ ನೀಡಲು ಸಾಧ್ಯವಾಗುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಎ ಗ್ರೇಡ್ ದೇವಸ್ಥಾನದಲ್ಲಿ ಗೋಶಾಲೆ ತೆರೆಯಲು ಷರತ್ತು ವಿಧಿಸಬೇಕು. ಈ ಬಗ್ಗೆ ದೇವಸ್ಥಾನ ಮುಕ್ತಗೊಳಿಸುವ ಆದೇಶದಲ್ಲಿ ಉಲ್ಲೇಖ ಮಾಡುವಂತೆ ಮನವಿ ಮೂಲಕ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.
Mangalore MLA Vedavyas Kamath requests cm to open Goshala in temple funds. He issued a memorandum to Chief Minister Bommai stating to build Goshala using each temple funds all over.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am