ಬ್ರೇಕಿಂಗ್ ನ್ಯೂಸ್
18-02-22 02:40 pm HK Desk news ಕರಾವಳಿ
ಉಡುಪಿ, ಫೆ.18 : ಇಲ್ಲಿನ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಹಾಕಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಇತರ ಮುಸ್ಲಿಂ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ.
ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಧರಣಿ ನಡೆಸಿದ್ದಾರೆ. ನಮಗೆ ಹಿಜಾಬ್ ಮುಖ್ಯ, ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯಲ್ಲ ಎಂದು ಕಾಲೇಜು ಪ್ರಾಂಶುಪಾಲರಿಗೆ ಒತ್ತಡ ಹೇರಿದ್ದಾರೆ.

ಕಾಲೇಜಿನ ಸಿಬಂದಿ, ಪ್ರಾಂಶುಪಾಲರು ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿದ್ದು ಎಲ್ಲರಿಗೂ ಪ್ರತ್ಯೇಕ ಕೊಠಡಿ ನೀಡುವುದಾಗಿ ಹೇಳಿದ್ದಾರೆ. ಅಲ್ಲಿಯೇ ಹಿಜಾಬ್ ತೆಗೆದು ಪರೀಕ್ಷೆ ಬರೆಯಿರಿ ಎಂದು ಹೊಸ ಅವಕಾಶ ನೀಡಿದ್ದಾರೆ. ಆದರೆ ಪ್ರಾಂಶುಪಾಲರ ಮನವಿಗೆ ಓಗೊಡದ ವಿದ್ಯಾರ್ಥಿಗಳು, ನಾವು ಇಡೀ ದಿನ ಕಾಲೇಜು ಗೇಟ್ ಬಳಿಯಲ್ಲಿಯೇ ಪ್ರತಿಭಟನೆ ನಡೆಸುತ್ತೇವೆ. ನಮಗೆ ಪರೀಕ್ಷೆಗಿಂತ ಹಿಜಾಬ್ ಮುಖ್ಯ ಎಂದಿದ್ದಾರೆ. ಆದರೆ ಕಾಲೇಜಿನ ಒಂದಷ್ಟು ವಿದ್ಯಾರ್ಥಿನಿಯರು ಕಾಲೇಜಿನ ಶಿಕ್ಷಕ ವೃಂದದ ಒತ್ತಾಯಕ್ಕೆ ಮಣಿದು ಪ್ರತ್ಯೇಕವಾಗಿ ಕುಳಿತು ಪರೀಕ್ಷೆ ಬರೆದಿದ್ದಾರೆ.


ಇದೇ ವೇಳೆ, ಕಾಲೇಜಿನ ಹೊರಗಡೆಯ ಮಂದಿ ಇಲ್ಲಿಯೂ ಹಿಜಾಬ್ ಗಲಾಟೆ ಎಬ್ಬಿಸಬೇಕೆಂದು ಪ್ರಚೋದನೆ ಮಾಡಿದ್ದಾರೆ. ಅದರಿಂದಾಗಿ ನಾವು ಧರಣಿ ನಡೆಸಿದ್ದಾಗಿ ಕೆಲವು ವಿದ್ಯಾರ್ಥಿಗಳು, ಕಾಲೇಜು ಸಿಬಂದಿ ಬಳಿ ಹೇಳಿಕೊಂಡಿದ್ದಾರೆ. ಕಾಲೇಜು ಆವರಣದಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಗಲಾಟೆ ಆಗದಂತೆ ನೋಡಿಕೊಂಡಿದ್ದಾರೆ.
The controversy over wearing Hijab in educational institutions spread to Milagres College, Kallianpur here on Friday February 18 with scores of students crowding at the college gate following confusion over the interim order regarding the headscarf. Muslim students, both girls and boys, were seen standing outside the college gate. Some of them were PU students and others pursuing undergraduation.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm