ಬ್ರೇಕಿಂಗ್ ನ್ಯೂಸ್
21-02-22 08:15 pm Mangaluru Correspondent ಕರಾವಳಿ
ಮಂಗಳೂರು, ಫೆ.21: ಸುರತ್ಕಲ್ ಟೋಲ್ ಗೇಟ್ ವಿರುದ್ಧ ಕಳೆದ 15 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಬಾಂಧವ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾಗ ಮಂಗಳಮುಖಿಯರ ತಂಡವೊಂದು ಸ್ಥಳಕ್ಕೆ ಆಗಮಿಸಿ, ಅಶ್ಲೀಲವಾಗಿ ನಡೆದುಕೊಂಡಿದ್ದರು. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರು ಮಂದಿ ಮಂಗಳಮುಖಿಯರನ್ನು ಪೊಲೀಸರು ಬಂಧಿಸಿದ್ದರು. ಅಲ್ಲದೆ, ಇದೇ ಘಟನೆಗೆ ಸಂಬಂಧಿಸಿ ಮಂಗಳಮುಖಿಯರು ಪ್ರತಿ ದೂರು ನೀಡಿದ್ದು, ಆಸಿಫ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಆನಂತರ, ಈ ನಡುವೆ ಹೈವೇ ಪ್ರಾಧಿಕಾರದಿಂದ ಟೋಲ್ ಗೇಟ್ ಬಳಿಯಲ್ಲೇ ದೊಡ್ಡ ಬ್ಯಾನರ್ ಹಾಕಿದ್ದು, ಸುರತ್ಕಲ್ ಟೋಲ್ ಗೇಟ್ ಅಧಿಕೃತವಾಗಿದೆ. ಈ ಬಗ್ಗೆ ಅಕ್ರಮವೆಂದು ಹೇಳಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಲಾಗಿತ್ತು. ಇದೀಗ ಅದೇ ನೆಪದಲ್ಲಿ ಆಸಿಫ್ ವಿರುದ್ಧ ಹೈವೇ ಪ್ರಾಧಿಕಾರದವರು ಸುರತ್ಕಲ್ ಠಾಣೆಗೆ ದೂರು ನೀಡಿದ್ದು, ಟೋಲ್ ಗೇಟ್ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ, ಸ್ಥಳದಲ್ಲಿ ವಾಹನ ಸಂಚಾರಕ್ಕೆ ತೊಡಕಾಗುತ್ತಿದೆ ಎಂದು ಹೇಳಿದ್ದರು. ಅದರಂತೆ ದೂರು ದಾಖಲಾಗಿದ್ದು, ಆಸಿಫ್ ಅವರನ್ನು ವಿಚಾರಣೆ ನಡೆಸುವುದಕ್ಕಾಗಿ ವಶಕ್ಕೆ ಪಡೆಯಲಾಗಿದೆ. ಯಾವುದೇ ರೀತಿ ಬಂಧನ ಮಾಡಿಲ್ಲ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ತಪ್ಪಾಗಿ ಮಾಹಿತಿ ನೀಡಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
ಅಲ್ಲದೆ, ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಆಸಿಫ್ ಪೊಲೀಸ್ ಇಲಾಖೆಯಿಂದ ಪರವಾನಗಿ ಪಡೆದಿರಲಿಲ್ಲ. ಇದಕ್ಕಾಗಿ ಅವರ ವಿರುದ್ಧ ನೋಟೀಸ್ ನೀಡಲು ತೆರಳಿದ್ದ ಪೊಲೀಸರ ವಿರುದ್ಧವೂ ಅಸಭ್ಯ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಪೊಲೀಸರು ನೋಟೀಸ್ ನೀಡಿದ್ದನ್ನು ಏನಿದೆ ಎಂದು ನೋಡುವ ಸೌಜನ್ಯವೂ ಅವರಿಗೆ ಇರಲಿಲ್ಲ. ಈ ಬಗ್ಗೆ ವಿಚಾರಣೆ ನಡೆಸುವುದಕ್ಕಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದಿದ್ದಾರೆ ಕಮಿಷನರ್.
Also Read:
Surathkal toll illegal protest social activist Asif Apathbandava arrested after case by Highway authority. Six transgenders have been arrested in connection to the attempted assault on social worker Asif Apatbandhava who has been on a protest near the tollgate at Suratkal for the last many days. A few transgenders had allegedly tried to attack him past midnight on Tuesday February 15.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm