ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಶಾಸಕ ಕಾಮತ್ 2 ಲಕ್ಷ ರೂ., ಭರತ್ ಶೆಟ್ಟಿಯಿಂದ ತಿಂಗಳ ವೇತನದ ಭರವಸೆ 

22-02-22 08:53 pm       Mangalore Correspondent   ಕರಾವಳಿ

ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಮಂಗಳೂರು, ಫೆ.22 : ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ತನ್ನ ಒಂದು ತಿಂಗಳ ವೇತನವನ್ನು ಹರ್ಷ ಕುಟುಂಬಕ್ಕೆ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. ‌

ಶಾಸಕ ವೇದವ್ಯಾಸ್ ಕಾಮತ್ ಈ ಕುರಿತು ಟ್ವೀಟ್ ಮಾಡಿದ್ದು  ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವ ಹಿಂದು ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ನನ್ನ ವೈಯಕ್ತಿಕ ನೆಲೆಯಿಂದ 2 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದೇನೆ. ಸಿದ್ಧಾಂತಕ್ಕಾಗಿ ಬಲಿದಾನಗೈದ ಹರ್ಷನ ಕುಟುಂಬದ ಜವಾಬ್ದಾರಿ ಹಿಂದು ಸಮಾಜದ ಮೇಲಿದೆ. ಹಾಗಾಗಿ ನಮ್ಮಿಂದಾಗುವಷ್ಟು ಸಹಾಯ ಮಾಡೋಣ. ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ" ಎಂದು ಹೇಳಿದ್ದಾರೆ.

ಹರ್ಷ ಹತ್ಯೆಯ ಹಿಂದೆ ರಾಷ್ಟ್ರ ವಿರೋಧಿ ‌ಸಂಘಟನೆಗಳ ಕೈವಾಡವಿದೆ. ಹಾಗಾಗಿ ಈ ಹತ್ಯೆಯ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿ, ದುರ್ಘಟನೆಯ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಗೃಹ ಸಚಿವರನ್ನು ಆಗ್ರಹಿಸುವುದಾಗಿ ಶಾಸಕ ಕಾಮತ್ ತಿಳಿಸಿದ್ದಾರೆ.  

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿ, ಕೊಲೆಯಾದ ಹರ್ಷನ ಕುಟುಂಬದ ಪರವಾಗಿ ಹಿಂದು ಸಮಾಜ ನಿಲ್ಲಬೇಕು ಎಂದು ಮನವಿ ಮಾಡಿದ್ದರು. ಇದನ್ನು ರೀಟ್ವೀಟ್ ಮಾಡಿದ್ದ ಶಾಸಕ ಭರತ್ ಶೆಟ್ಟಿ ತನ್ನ ಒಂದು ತಿಂಗಳ ಶಾಸಕತ್ವದ ಸಂಬಳವನ್ನು ನೀಡುವುದಾಗಿ ಹೇಳಿದ್ದರು.‌ ಶಾಸಕ ಸ್ಥಾನದ ಸಂಬಳ ಎಪ್ರಿಲ್ ತಿಂಗಳಿನಿಂದ ಅನ್ವಯ ಆಗುವಂತೆ 40 ಸಾವಿರ ಸಿಗಲಿದೆ.

Mangalore Both MLAs Vedavyas Kamath and Bharath Shetty donate their salary to Harsha family who was brutally murdered in Shivamogga.