ಬ್ರೇಕಿಂಗ್ ನ್ಯೂಸ್
23-02-22 02:38 pm Mangalore Correspondent ಕರಾವಳಿ
ಉಳ್ಳಾಲ, ಫೆ.23 : ಪ್ರಿಯಕರನೊಂದಿಗೆ ಮೊಬೈಲ್ ಸಂಭಾಷಣೆಯಲ್ಲಿದ್ದ ವೇಳೆಯೇ ನೇಣಿಗೆ ಕೊರಳೊಡ್ಡಿದ ಯುವತಿಯೋರ್ವಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂಪಲ ಬಲ್ಯ ಎಂಬಲ್ಲಿ ನಡೆದಿದೆ.
ಕುಂಪಲ ಬಲ್ಯ ನಿವಾಸಿ ಹರ್ಷಿತ (21) ಮೃತ ದುರ್ದೈವಿ. ಹರ್ಷಿತ ನಿನ್ನೆ ಮಧ್ಯಾಹ್ನ ತನ್ನ ಬಲ್ಯದ ಮನೆಯೊಳಗೆ ಪ್ರಿಯಕರನೊಂದಿಗೆ ಮೊಬೈಲ್ ಫೋನಲ್ಲಿ ಮಾತನಾಡುತ್ತಳೇ ಸಿಲಿಂಗ್ ಫ್ಯಾನಿಗೆ ಚೂಡಿದಾರ್ ಶಾಲಿನ ನೇಣು ಹಾಕಿ ಕೊರಳೊಡ್ಡಿದ್ದಾಳೆ. ಹತ್ತಿರದವನೇ ಆದ ಬಲ್ಯ ಬ್ಯಾಂಕ್ ಕಾಲನಿ ನಿವಾಸಿಯ ಪ್ರಿಯಕರ ತಕ್ಷಣ ಆಕೆಯನ್ನ ನೇಣು ಕುಣಿಕೆಯಿಂದ ಇಳಿಸಿ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಹರ್ಷಿತ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ.
ಮೃತ ಹರ್ಷಿತ ಮತ್ತು ಪ್ರಿಯಕರನ ಮಧ್ಯೆ ವಿರಸ ಮೂಡಿದ್ದು ಈ ಬಗ್ಗೆನೇ ಫೋನಲ್ಲಿ ಮಾತನಾಡುತ್ತಲೇ ನೇಣು ಬಿಗಿದಿರುವುದಾಗಿ ಹೇಳಲಾಗುತ್ತಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳೂ ಇದ್ದು ಪೊಲೀಸರು ಪ್ರಿಯಕರನ ವಿಚಾರಣೆ ನಡೆಸುತ್ತಿದ್ದಾರೆ.
ಮೃತ ಹರ್ಷಿತ ಪೋಷಕರಿಗೆ ಏಕೈಕ ಮಗಳಾಗಿದ್ದು ಆಕೆಯ ತಂದೆ ಗಂಗಾಧರ್ ಗಾಣಿಗ ಅವರು ಐದು ವರುಷಗಳ ಹಿಂದಷ್ಟೆ ಕನ್ನಡಿ(ಕಂದಡಿ) ಹಾವು ಕಡಿದು ಮೃತ ಪಟ್ಟಿದ್ದರು. ಹರ್ಷಿತ ತಾಯಿ ಗೀತಾ ಅವರನ್ನ ಅಗಲಿದ್ದಾಳೆ. ಕಳೆದ ಒಂದು ವರುಷದಿಂದ ಕುಂಪಲದಲ್ಲಿ ರೂಪದರ್ಶಿ ಪ್ರೇಕ್ಷಾಳಿಂದ ತೊಡಗಿ ಸರಣಿಯಾಗಿ ಅಸಹಜ ಸಾವುಗಳು ಸಂಭವಿಸುತ್ತಿದ್ದು ಇದೀಗ ಹರ್ಷಿತಳ ಆತ್ಮಹತ್ಯೆಯೂ ಆ ಸರದಿಗೆ ಸೇರಿದೆ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸುತ್ತಿದ್ದಾರೆ.
Mangalore 21 year old girl from Kumpala, Ullal commits suicide while talking to her boyfriend over phone call. The deceased has been identified as Harshitha. She was rushed to the hospital but she breathed her lost after failure of medical treatment.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
13-11-25 05:13 pm
HK Staffer
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
13-11-25 05:01 pm
HK Staffer
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm