ಬ್ರೇಕಿಂಗ್ ನ್ಯೂಸ್
30-07-20 12:22 pm Mangalore Reporter ಕರಾವಳಿ
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ - ಸವಾಲುಗಳ ಕುರಿತು ಅರಿತುಕೊಳ್ಳುತ್ತೇನೆ. ಈ ಹಿಂದೆ ನಾನು ಕಾರ್ಯನಿರ್ವಹಿಸಿದ್ದ ಬೆಳಗಾವಿ ಜಿಲ್ಲೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸಲಿರುವ ದ.ಕ ಜಿಲ್ಲೆ ಈ ಎರಡು ಕೂಡಾ ಗಡಿ ಭಾಗದ ಜಿಲ್ಲೆಯಾಗಿದೆ. ಹೀಗಾಗಿ ಎರಡು ಕಡೆಯೂ ಹೊರಗಡೆಯಿಂದ ಬಂದಿರುವ ಜನ ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್ಚಿನ ಕೇಸ್ ಬರುತ್ತವೆ. ಇದು ಅಧಿಕಾರಿಗಳಿಗೆ ಮತ್ತು ಎಲ್ಲರಿಗೂ ಚಾಲೆಂಜ್ ಆಗಿದೆ.
ಸದ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸ ಕಾರ್ಯಗಳನ್ನುಮುಂದುವರಿಸುತ್ತೇನೆ. ಎಲ್ಲೆಲ್ಲಿ ಸುಧಾರಣೆ ಅಗತ್ಯವಿದೆ ಆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ದ.ಕ ಜಿಲ್ಲೆಯಲ್ಲಿ ಈ ಹಿಂದೆ ಕೂಡಾ ಕೆಲಸ ಮಾಡಿದ್ದೇನೆ. ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಗತ್ಯವಿರಲ್ಲಿ ಸುಧಾರಣೆ ತರುತ್ತೇನೆ ಎಂದು ಹೇಳಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am