ಬ್ರೇಕಿಂಗ್ ನ್ಯೂಸ್
19-09-20 05:25 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಅಸಲಿಗೆ ಶೆಟ್ಟಿ ಸಮುದಾಯದವನೇ ಅಲ್ಲ. ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಹೆಸರಿನ ಮುಂದೆ ಶೆಟ್ಟಿ ಸರ್ ನೇಮ್ ಸೇರಿಸಿಕೊಂಡಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
‘ಕಿಶೋರ್ ಶೆಟ್ಟಿ’ ಬಂಧನ ಸುದ್ದಿ ಬೆಳಗ್ಗಿನಿಂದ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಸುರತ್ಕಲ್ ಪರಿಸರದ ಬಂಟ ಸಮುದಾಯದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ ಒರಿಜಿನಲ್ ಶೆಟ್ಟಿಯಲ್ಲ. ತನ್ನ ಹೆಸರಿನ ಮುಂದೆ ಉದ್ದೇಶಪೂರ್ವಕವಾಗಿ ಶೆಟ್ಟಿ ಹಾಕ್ಕೊಂಡಿದ್ದಾನೆ. ಬೇಕಿದ್ದರೆ ಆತನಲ್ಲಿ ಕೇಳಿ ನೋಡಿ ಎಂದು ಹೇಳಿದ್ದರು. ಈ ಬಗ್ಗೆ ಆತನನ್ನು ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಪ್ರಶ್ನೆ ಮಾಡಿದಾಗ, ಕಿಶೋರ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಶೆಟ್ಟಿ ಹಾಕ್ಕೊಂಡಿದ್ದರ ಕಾರಣವನ್ನೂ ಹೇಳಿದ್ದಾನೆ.

ಆರಂಭದಲ್ಲಿ ಝೀಟಿವಿಯ ರಿಯಾಲಿಟಿ ಶೋಗಳಲ್ಲಿ ಇದ್ದಾಗ ಕಿಶೋರ್, ಮಂಗಳೂರು ಅಂತಷ್ಟೇ ಬಳಕೆ ಮಾಡುತ್ತಿದ್ದ. ಆನಂತರ ಸ್ವಲ್ಪ ಹೆಸರು ಬಂದೊಡನೆ ಬಾಲಿವುಡ್ ಕಲಾವಿದರ ಪರಿಚಯ ಆಗಿತ್ತು. ಮಂಗಳೂರು ಮೂಲದವ, ಹೆಸರಿನ ಜೊತೆಗೆ ಶೆಟ್ಟಿ ಸರ್ ನೇಮ್ ಇದ್ದರೆ ಹೆಚ್ಚು ಅವಕಾಶ, ಮರ್ಯಾದೆ ಸಿಗುತ್ತೆ ಅಂತ ಸೇರಿಸಿಕೊಂಡಿದ್ದೆ ಅಂತಾ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ.
ಮಂಗಳೂರಿನ ಕುಳಾಯಿ ನಿವಾಸಿಯಾಗಿದ್ದ ಕಿಶೋರ್, 2011ರ ವೇಳೆಗೆ ಝೀ ರಿಯಾಲಿಟಿ ಶೋಗಳಿಗೆ ಹೋಗಿ ಹೆಸರು ಮಾಡಿದ್ದ. ಅದು ಬಿಟ್ಟರೆ ಮಂಗಳೂರಿನಲ್ಲಿ ಡ್ಯಾನ್ಸ್ ಕ್ಲಾಸ್ ಆಗಿರಲಿ, ಯಾವುದೇ ಡ್ಯಾನ್ಸ್ ಚಟುವಟಿಕೆಯನ್ನು ಮಾಡಿಕೊಂಡಿಲ್ಲ ಎಂದು ಆತನ ನಿಕಟವರ್ತಿಗಳು ಹೇಳಿದ್ದಾರೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm