ಬ್ರೇಕಿಂಗ್ ನ್ಯೂಸ್
25-02-22 04:04 pm Mangalore Correspondent ಕರಾವಳಿ
ಮಂಗಳೂರು, ಫೆ.25 : ಶಾಲೆಗಳಲ್ಲಿ ಹಿಜಾಬ್ ಧರಿಸಿಯೇ ತೆರಳಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದು, ಅವರ ಪರವಾಗಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಇತ್ತೀಚೆಗೆ ವಿವಾದ ಆಗಿತ್ತು. ಆದರೆ, ಈಗ ಮಂಗಳೂರಿನ ಕೆಲವು ಮುಸ್ಲಿಮ್ ಯುವಕರು ಮುಸ್ಲಿಂ ಮಹಿಳೆಯರಿಗೆ ಫತ್ವಾ ಹೊರಡಿಸಲು ಮುಂದಾಗಿದ್ದಾರೆ. ಬುರ್ಖಾ ಧರಿಸಿಯೂ ಒಬ್ಬಂಟಿ ಓಡಾಟ ಮಾಡುವಂತಿಲ್ಲ. ಮಾಲ್, ಹೊಟೇಲ್ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ತಿರುಗಾಡುವಂತಿಲ್ಲ ಎಂದು ತಾಲಿಬಾನ್ ರೀತಿ ಫತ್ವಾ ಜಾರಿಗೆ ಹೊರಟಿದ್ದಾರೆ.
ಮುಸ್ಲಿಮ್ ಡಿಫೆನ್ಸ್ ಫೋರ್ಸ್ ಎನ್ನುವ ಹೆಸರಲ್ಲಿ ಮೂಲಭೂತವಾದಿ ಯುವಕರು ಪ್ರತ್ಯೇಕ ಸಂಘಟನೆ ಮಾಡಿಕೊಂಡಿದ್ದು, ಈ ಬಗ್ಗೆ ಮುಸ್ಲಿಂ ಮಹಿಳೆಯರ ಪೋಷಕರಿಗೂ ವಾರ್ನಿಂಗ್ ಕೊಡುತ್ತಿದ್ದೇವೆ. ಜೊತೆಗೆ, ಮುಸ್ಲಿಮ್ ಮಹಿಳೆಯರು ಬುರ್ಖಾ, ಹಿಜಾಬ್ ಧರಿಸಿಯೂ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡುತ್ತಿರುವುದು ಕಂಡುಬಂದಲ್ಲಿ ಅವರ ಮೇಲೆ ದಾಳಿ ನಡೆಸಲಾಗುವುದು. ಇದಕ್ಕಾಗಿ ಸಂಘಟನೆ ಮಾಡಿಕೊಳ್ಳಲಾಗಿದೆ ಎಂದು ವಾಟ್ಸಪ್ ಗ್ರೂಪ್ ಗಳಲ್ಲಿ ಯುವಕರು ಬೆದರಿಕೆ ಒಡ್ಡಿದ್ದಾರೆ.
ಕಮಿಷನರ್ ಕಚೇರಿಯಲ್ಲಿ ಹೊಸದಾಗಿ ಆರಂಭಿಸಿರುವ ಜಾಲತಾಣಗಳ ಮೇಲೆ ನಿಗಾ ಇಡುವ ಸೈಬರ್ ಕಚೇರಿ ಸಿಬಂದಿ ಈ ಬಗ್ಗೆ ಪತ್ತೆ ಮಾಡಿದ್ದು, ಈ ಗ್ರೂಪ್ ಹಿಂದೆ ಯಾರಿದ್ದಾರೆ, ಯಾರು ಮಾಡುತ್ತಿದ್ದಾರೆ ಎನ್ನುವುದನ್ನು ಪತ್ತೆ ಮಾಡುತ್ತೇವೆ. ಮಹಿಳೆಯರನ್ನು ಮತ್ತು ಅವರ ಕುಟುಂಬಸ್ಥರಿಗೆ ಬೆದರಿಕೆ ಹಾಕುವ ರೀತಿ ವರ್ತಿಸುತ್ತಿದ್ದಾರೆ. ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡುವಂತಿಲ್ಲ ಎಂದು ಬೇರೆಯವರಿಗೆ ಹೇಳುವುದು ಅಪರಾಧ. ಈ ಬಗ್ಗೆ ನಿಗಾ ಇಟ್ಟಿದ್ದು ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Muslim Defence force Facebook page threatens Muslim girls not to wear hijab inside malls and hotel in Mangalore. This page had recently posted that they would attack Muslim girls in mall if they were found wearing hijab and roaming with guys for love.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am