ಬ್ರೇಕಿಂಗ್ ನ್ಯೂಸ್
20-09-20 10:06 am Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 21: ಉಡಪಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟಕ್ಕೆ ಜನಜೀವನ ಸ್ತಬ್ಧವಾಗುವ ಲಕ್ಷಣ ಗೋಚರಿಸಿದೆ. ಉಡುಪಿ ಪೇಟೆ ಆಸುಪಾಸಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಂಡುಕೇಳರಿಯದ ರೀತಿ ನೆರೆ ಕಾಣಿಸಿಕೊಂಡಿದ್ದು ಉಡುಪಿ - ಮಣಿಪಾಲ ಸಂಪರ್ಕಿಸುವ ಹೆದ್ದಾರಿ ಹೊಳೆಯ ರೂಪ ಪಡೆದು ಪ್ರವಾಹ ಕಾಣಿಸಿದೆ. ಹೆದ್ದಾರಿಯಲ್ಲಿ ನೀರು ತುಂಬಿದ್ದರಿಂದ ಸಂಪರ್ಕ ಕಡಿತಗೊಂಡಿದೆ.
ಶನಿವಾರ ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದ್ದು ಉಡುಪಿ ನಗರದ ಪ್ರಮುಖ ಬೀದಿಗಳು ಜಲಾವೃತವಾಗಿವೆ. ಉಡುಪಿ- ಮಣಿಪಾಲ ಸಂಪರ್ಕದ ಹೆದ್ದಾರಿಯಲ್ಲಿ ನಿನ್ನೆ ರಾತ್ರಿಯಿಂದಲೇ ನೀರು ತುಂಬಿ ಹೊಳೆಯಂತೆ ಹರಿಯುತ್ತಿದೆ. ಕೃಷ್ಣಮಠ ಪರಿಸರದ ಕಲ್ಸಂಕ ಬೈಲಕೆರೆ ಆಸುಪಾಸಿನಲ್ಲಿ ಭಾರೀ ನೆರೆ ಕಾಣಿಸಿಕೊಂಡಿದ್ದು ಹಲವಾರು ಮನೆಗಳು ನೀರಿನಲ್ಲಿ ಮುಳುಗಿವೆ.
ಬನ್ನಂಜೆ ಕೊಡವೂರು ಪಾಡಿಗಾರು ಗುಂಡಿಬೈಲಿನ ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿವೆ. ಪೆರ್ಡೂರಿನ ಪುತ್ತಿಗೆ ಮಠದ ಪರಿಸರದಲ್ಲಿ ರಸ್ತೆ ಸಂಚಾರ ಬಂದ್ ಆಗಿದೆ. ನೆರೆಯಿಂದಾಗಿ ಮಲ್ಪೆ- ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿದ್ದು ಸಂಚಾರ ವ್ಯತ್ಯಯಗೊಂಡಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ಸೇತುವೆ ಪರಿಸರವೂ ಮುಳುಗಡೆಯಾಗಿದ್ದು ಈ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ.
ಸ್ವರ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ಆಸುಪಾಸಿನಲ್ಲಿ ನೆರೆ ಕಾಣಿಸಿಕೊಂಡಿದೆ ಎನ್ನಲಾಗ್ತಿದೆ. ಮಳೆನೀರು ಹರಿಯಲು ಜಾಗ ಇಲ್ಲದೆ ಉಡುಪಿ ಪೇಟೆಯ ವಿವಿಧೆಡೆ ಮುಳುಗಡೆಯಾಗಿದೆ. ಮಾಣೈ ಪರಿಸರದಲ್ಲಿ ನೀರು ಪ್ರವಾಹದ ರೂಪದಲ್ಲಿ ಹರಿಯುತ್ತಿದ್ದು ಆ ಭಾಗದ ಸುಮಾರು ಇಪ್ಪತ್ತು ಮನೆಗಳು ಮುಳುಗಡೆಯಾಗಿವೆ. ಸ್ಥಳೀಯ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ.
ಉಡುಪಿ- ಮಣಿಪಾಲ ಹೆದ್ದಾರಿ ಬಂದ್ ಆಗಿರುವುದರಿಂದ ಉಡುಪಿ- ಆಗುಂಬೆ - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಸಂಚಾರವೂ ಸ್ಥಗಿತವಾಗಿದೆ.
ಪುತ್ತಿಗೆ ವಿದ್ಯಾಪೀಠಕ್ಕೆ ನುಗ್ಗಿದ ನೀರು !
ಇನ್ನು ಹಿರಿಯಡ್ಕ ಪರಿಸರದಲ್ಲಿ ಸ್ವರ್ಣಾ ನದಿಯ ನೆರೆಯಿಂದಾಗಿ ಪುತ್ತಿಗೆ ಶ್ರೀಗಳ ಮೂಲಮಠಕ್ಕೆ ನೀರು ನುಗ್ಗಿದೆ. ಮಠದ ಗೋಶಾಲೆಯೂ ಜಲಾವೃತಗೊಂಡಿದ್ದು ಸ್ಥಳೀಯರ ನೆರವಿನೊಂದಿಗೆ ಗೋವುಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
25-05-25 02:14 pm
HK News Desk
Drone Attack, Russia, Brijesh Chowta: ಪಾಕ್ ಭಯ...
23-05-25 08:08 pm
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
25-05-25 04:19 pm
Mangalore Correspondent
Mangalore CCB, MFC Hotel Owner Siddique Arres...
25-05-25 02:46 pm
ಕೇರಳಕ್ಕೆ ಮುಂಗಾರು ಎಂಟ್ರಿ ; 16 ವರ್ಷಗಳ ಬಳಿಕ ಎಂಟು...
24-05-25 04:29 pm
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm