ಬ್ರೇಕಿಂಗ್ ನ್ಯೂಸ್
20-09-20 10:06 am Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 21: ಉಡಪಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟಕ್ಕೆ ಜನಜೀವನ ಸ್ತಬ್ಧವಾಗುವ ಲಕ್ಷಣ ಗೋಚರಿಸಿದೆ. ಉಡುಪಿ ಪೇಟೆ ಆಸುಪಾಸಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಂಡುಕೇಳರಿಯದ ರೀತಿ ನೆರೆ ಕಾಣಿಸಿಕೊಂಡಿದ್ದು ಉಡುಪಿ - ಮಣಿಪಾಲ ಸಂಪರ್ಕಿಸುವ ಹೆದ್ದಾರಿ ಹೊಳೆಯ ರೂಪ ಪಡೆದು ಪ್ರವಾಹ ಕಾಣಿಸಿದೆ. ಹೆದ್ದಾರಿಯಲ್ಲಿ ನೀರು ತುಂಬಿದ್ದರಿಂದ ಸಂಪರ್ಕ ಕಡಿತಗೊಂಡಿದೆ.
ಶನಿವಾರ ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದ್ದು ಉಡುಪಿ ನಗರದ ಪ್ರಮುಖ ಬೀದಿಗಳು ಜಲಾವೃತವಾಗಿವೆ. ಉಡುಪಿ- ಮಣಿಪಾಲ ಸಂಪರ್ಕದ ಹೆದ್ದಾರಿಯಲ್ಲಿ ನಿನ್ನೆ ರಾತ್ರಿಯಿಂದಲೇ ನೀರು ತುಂಬಿ ಹೊಳೆಯಂತೆ ಹರಿಯುತ್ತಿದೆ. ಕೃಷ್ಣಮಠ ಪರಿಸರದ ಕಲ್ಸಂಕ ಬೈಲಕೆರೆ ಆಸುಪಾಸಿನಲ್ಲಿ ಭಾರೀ ನೆರೆ ಕಾಣಿಸಿಕೊಂಡಿದ್ದು ಹಲವಾರು ಮನೆಗಳು ನೀರಿನಲ್ಲಿ ಮುಳುಗಿವೆ.
ಬನ್ನಂಜೆ ಕೊಡವೂರು ಪಾಡಿಗಾರು ಗುಂಡಿಬೈಲಿನ ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿವೆ. ಪೆರ್ಡೂರಿನ ಪುತ್ತಿಗೆ ಮಠದ ಪರಿಸರದಲ್ಲಿ ರಸ್ತೆ ಸಂಚಾರ ಬಂದ್ ಆಗಿದೆ. ನೆರೆಯಿಂದಾಗಿ ಮಲ್ಪೆ- ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿದ್ದು ಸಂಚಾರ ವ್ಯತ್ಯಯಗೊಂಡಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ಸೇತುವೆ ಪರಿಸರವೂ ಮುಳುಗಡೆಯಾಗಿದ್ದು ಈ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ.









ಸ್ವರ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ಆಸುಪಾಸಿನಲ್ಲಿ ನೆರೆ ಕಾಣಿಸಿಕೊಂಡಿದೆ ಎನ್ನಲಾಗ್ತಿದೆ. ಮಳೆನೀರು ಹರಿಯಲು ಜಾಗ ಇಲ್ಲದೆ ಉಡುಪಿ ಪೇಟೆಯ ವಿವಿಧೆಡೆ ಮುಳುಗಡೆಯಾಗಿದೆ. ಮಾಣೈ ಪರಿಸರದಲ್ಲಿ ನೀರು ಪ್ರವಾಹದ ರೂಪದಲ್ಲಿ ಹರಿಯುತ್ತಿದ್ದು ಆ ಭಾಗದ ಸುಮಾರು ಇಪ್ಪತ್ತು ಮನೆಗಳು ಮುಳುಗಡೆಯಾಗಿವೆ. ಸ್ಥಳೀಯ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ.
ಉಡುಪಿ- ಮಣಿಪಾಲ ಹೆದ್ದಾರಿ ಬಂದ್ ಆಗಿರುವುದರಿಂದ ಉಡುಪಿ- ಆಗುಂಬೆ - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಸಂಚಾರವೂ ಸ್ಥಗಿತವಾಗಿದೆ.
ಪುತ್ತಿಗೆ ವಿದ್ಯಾಪೀಠಕ್ಕೆ ನುಗ್ಗಿದ ನೀರು !
ಇನ್ನು ಹಿರಿಯಡ್ಕ ಪರಿಸರದಲ್ಲಿ ಸ್ವರ್ಣಾ ನದಿಯ ನೆರೆಯಿಂದಾಗಿ ಪುತ್ತಿಗೆ ಶ್ರೀಗಳ ಮೂಲಮಠಕ್ಕೆ ನೀರು ನುಗ್ಗಿದೆ. ಮಠದ ಗೋಶಾಲೆಯೂ ಜಲಾವೃತಗೊಂಡಿದ್ದು ಸ್ಥಳೀಯರ ನೆರವಿನೊಂದಿಗೆ ಗೋವುಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm