ಬ್ರೇಕಿಂಗ್ ನ್ಯೂಸ್
28-02-22 08:02 pm Mangalore Correspondent ಕರಾವಳಿ
ಮಂಗಳೂರು, ಫೆ.28: ನಾಪತ್ತೆಯಾಗಿದ್ದ 16 ವರ್ಷದ ಹುಡುಗನ ಶವ ಹೊಯ್ಗೆಬಜಾರ್ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಹುಡುಗನ ಕೊಲೆ ಆಗಿದೆಯೇ, ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ನೀರಿಗೆ ಸ್ನಾನಕ್ಕೆ ಇಳಿದವನು ಸಾವು ಕಂಡಿದ್ದಾನೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಮಹಾಕಾಳಿ ಪಡ್ಪುವಿನಲ್ಲಿ ವಾಸವಿರುವ ಆಶಾ ಮತ್ತು ಚೆನ್ನಪ್ಪ ದಂಪತಿಯ ಪುತ್ರ ದೃಶ್ಯಂತ್ (16) ಮೃತ ಹುಡುಗ. ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ನಲ್ಲಿ 9 ನೇ ತರಗತಿ ಕಲಿಯುತ್ತಿದ್ದ ದೃಶ್ಯಂತ್, ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮನೆ ಬಳಿಯ ಮೈದಾನದಲ್ಲಿ ಆಟವಾಡಲು ಹೋಗಿದ್ದ. ಗೆಳೆಯರ ಜೊತೆ ಕ್ರಿಕೆಟ್ ಆಡುತ್ತಿದ್ದ ಹುಡುಗ ಆನಂತರ ಮನೆಗೆ ಬಂದಿರಲಿಲ್ಲ.

ಈ ಬಗ್ಗೆ ಜೊತೆಗಿದ್ದ ಗೆಳೆಯರಲ್ಲಿ ಹೆತ್ತವರು ವಿಚಾರಿಸಿದ್ದು ತಮಗೇನೂ ಗೊತ್ತಿಲ್ಲ ಎಂದಿದ್ದರು. ಇಂದು ಬೆಳಗ್ಗೆ ತಾಯಿ ಆಶಾ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಸಂಜೆ ವೇಳೆಗೆ ಅದೇ ಹುಡುಗನ ಶವ ಹೊಯ್ಗೆ ಬಜಾರ್ ಬಳಿ ನದಿ ತೀರದಲ್ಲಿ ಪತ್ತೆಯಾಗಿದೆ.
ಆಡಲು ಹೋಗಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ. ಅಲ್ಲದೆ, ಪ್ಯಾಂಟ್ ಹಾಕ್ಕೊಂಡು ಹೋಗಿದ್ದವನು ಚಡ್ಡಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ಸ್ನಾನಕ್ಕಿಳಿದು ಮೃತಪಟ್ಟಿದ್ದಾನೆಯೇ, ಬೇರೆ ಏನಾದರೂ ಕೈವಾಡ ಇದೆಯೇ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore 16 year old boy body found in Netravathi river. The deceased has been identified as Dhrushyanth. He was a 9th STD student and was said to be missing since Sunday after he had been to play cricket with his friends.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 09:28 pm
HK News Desk
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm