ಬ್ರೇಕಿಂಗ್ ನ್ಯೂಸ್
28-02-22 08:02 pm Mangalore Correspondent ಕರಾವಳಿ
ಮಂಗಳೂರು, ಫೆ.28: ನಾಪತ್ತೆಯಾಗಿದ್ದ 16 ವರ್ಷದ ಹುಡುಗನ ಶವ ಹೊಯ್ಗೆಬಜಾರ್ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಹುಡುಗನ ಕೊಲೆ ಆಗಿದೆಯೇ, ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ನೀರಿಗೆ ಸ್ನಾನಕ್ಕೆ ಇಳಿದವನು ಸಾವು ಕಂಡಿದ್ದಾನೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಮಹಾಕಾಳಿ ಪಡ್ಪುವಿನಲ್ಲಿ ವಾಸವಿರುವ ಆಶಾ ಮತ್ತು ಚೆನ್ನಪ್ಪ ದಂಪತಿಯ ಪುತ್ರ ದೃಶ್ಯಂತ್ (16) ಮೃತ ಹುಡುಗ. ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ನಲ್ಲಿ 9 ನೇ ತರಗತಿ ಕಲಿಯುತ್ತಿದ್ದ ದೃಶ್ಯಂತ್, ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮನೆ ಬಳಿಯ ಮೈದಾನದಲ್ಲಿ ಆಟವಾಡಲು ಹೋಗಿದ್ದ. ಗೆಳೆಯರ ಜೊತೆ ಕ್ರಿಕೆಟ್ ಆಡುತ್ತಿದ್ದ ಹುಡುಗ ಆನಂತರ ಮನೆಗೆ ಬಂದಿರಲಿಲ್ಲ.

ಈ ಬಗ್ಗೆ ಜೊತೆಗಿದ್ದ ಗೆಳೆಯರಲ್ಲಿ ಹೆತ್ತವರು ವಿಚಾರಿಸಿದ್ದು ತಮಗೇನೂ ಗೊತ್ತಿಲ್ಲ ಎಂದಿದ್ದರು. ಇಂದು ಬೆಳಗ್ಗೆ ತಾಯಿ ಆಶಾ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಸಂಜೆ ವೇಳೆಗೆ ಅದೇ ಹುಡುಗನ ಶವ ಹೊಯ್ಗೆ ಬಜಾರ್ ಬಳಿ ನದಿ ತೀರದಲ್ಲಿ ಪತ್ತೆಯಾಗಿದೆ.
ಆಡಲು ಹೋಗಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ. ಅಲ್ಲದೆ, ಪ್ಯಾಂಟ್ ಹಾಕ್ಕೊಂಡು ಹೋಗಿದ್ದವನು ಚಡ್ಡಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ಸ್ನಾನಕ್ಕಿಳಿದು ಮೃತಪಟ್ಟಿದ್ದಾನೆಯೇ, ಬೇರೆ ಏನಾದರೂ ಕೈವಾಡ ಇದೆಯೇ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore 16 year old boy body found in Netravathi river. The deceased has been identified as Dhrushyanth. He was a 9th STD student and was said to be missing since Sunday after he had been to play cricket with his friends.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm