ಬ್ರೇಕಿಂಗ್ ನ್ಯೂಸ್
20-09-20 05:21 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 21: ಮಹಿಳೆಯೊಬ್ಬರು ಗಂಡನ ಮೇಲಿನ ಸಿಟ್ಟಿನಲ್ಲಿ ಇಬ್ಬರು ಮಕ್ಕಳಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಕೊಟ್ಟು ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಎಂಟು ವರ್ಷದ ಹೆಣ್ಣು ಮಗು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಸೆ.16ರಂದು ಘಟನೆ ನಡೆದಿದ್ದು , ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ರಘುನಾಥ ಎಂಬಾತನ ಪತ್ನಿ ದಿವ್ಯಶ್ರೀ (29) ತನ್ನ ಇಬ್ಬರು ಮಕ್ಕಳಾದ ಅಜಯ್ (10) ಮತ್ತು ಅನ್ವಿತಾ (8) ಅವರಿಗೆ ಜ್ಯೂಸ್ನಲ್ಲಿ ವಿಷ ಬೆರೆಸಿ ನೀಡಿ ಬಳಿಕ ತಾನೂ ಸೇವಿಸಿದ್ದಾರೆ ಎನ್ನಲಾಗಿದೆ.
ರಘುನಾಥನಿಗೆ ಅನ್ಯ ಸ್ತ್ರೀಯೊಂದಿಗೆ ಸಂಬಂಧವಿದೆ ಎಂದು ತಿಳಿದ ದಿವ್ಯಶ್ರೀ, ಲಾಕ್ಡೌನ್ ಬಳಿಕದ ಆರು ತಿಂಗಳಲ್ಲಿ ತನ್ನ ಮಕ್ಕಳ ಜೊತೆ ಗಂಡನ ಮನೆ ಬಿಟ್ಟು ನಿಡ್ಪಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಈ ನಡುವೆ ಮಾನಸಿಕವಾಗಿ ನೊಂದಿದ್ದ ದಿವ್ಯಶ್ರೀ ಸೆ.16ರಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಲ್ಲದೆ, ಆವತ್ತೇ ಮಂಗಳೂರಿನ ಸಂಬಂಧಿಕರ ಮನೆಗೆ ತೆರಳಿದ್ದರು ಎನ್ನಲಾಗುತ್ತಿದ್ದು, ಸೆ.18ರಂದು ಬಾಲಕಿ ಅಸ್ವಸ್ಥಗೊಂಡಿದ್ದಳು. ಬಾಲಕಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಸೆ.19ರಂದು ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ದಿವ್ಯಶ್ರೀ ಹಾಗು ಪತ್ನಿಗೆ ಕಿರುಕುಳ ನೀಡಿದ ಆರೋಪದಲ್ಲಿ ರಘನಾಥ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am