ಬ್ರೇಕಿಂಗ್ ನ್ಯೂಸ್
04-03-22 09:57 pm Mangalore Correspondent ಕರಾವಳಿ
ಮಂಗಳೂರು, ಮಾ.4: ದಕ್ಷಿಣ ಕನ್ನಡ ಜಿಲ್ಲಾ ಬೆರಳಚ್ಚು ತನಿಖಾ ವಿಭಾಗದಲ್ಲಿ ಎಎಸ್ಐ ಆಗಿದ್ದ ಬೆಳಗಾವಿ ಮೂಲದ ತಿಪ್ಪಣ್ಣ ನಾಗವ್ವ ಮಾದರ (37) ನಗರದ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಇಂದು ಸಂಜೆ ನಾಲ್ಕು ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿರುವ ಬೆರಳಚ್ಚು ವಿಭಾಗದ ಕಚೇರಿಗೆ ಪೊಲೀಸ್ ಲೇನ್ ಬಳಿಯ ವಸತಿ ಗೃಹದಿಂದ ನಡೆದುಕೊಂಡು ಹೋಗುತ್ತಿದ್ದಾಗ, ಎಬಿ ಶೆಟ್ಟಿ ವೃತ್ತದ ಬಳಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿಎಆರ್ ಸಿಬಂದಿ ರಮೇಶ್ ಉಪಚರಿಸಿ, ಅಲ್ಲಿಯೇ ಇರುವ ಎಂವಿ ಶೆಟ್ಟಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಆಂಬುಲೆನ್ಸ್ ಮೂಲಕ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ತಲುಪುವಾಗಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸೂರು ಚಿಪ್ಪಾಲ್ ಕಟ್ಟಿ ನಿವಾಸಿಯಾಗಿರುವ ತಿಪ್ಪಣ್ಣ ಮಾದರ 2011ರಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಕರ್ತವ್ಯದಲ್ಲಿದ್ದರು. ಬಳಿಕ ಎಎಸ್ಐ ಆಗಿ ಭಡ್ತಿ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಆರು ತಿಂಗಳುಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಪತ್ನಿ ದೀಪಾ ತಿಪ್ಪಣ್ಣ ಮಾದರ, ಮಕ್ಕಳಾದ ನಿಹಾರಿಕಾ, ಅನ್ವಿತಾ, ನಿಶಾಂತ್ ಅವರನ್ನು ಅಗಲಿದ್ದಾರೆ.
Forensic ASI dies walking on the way to SP office in Mangalore. The deceased has been identified as Tippana (37).
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:00 pm
HK News Desk
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm