ಬ್ರೇಕಿಂಗ್ ನ್ಯೂಸ್
21-09-20 06:26 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 21: ಉಡುಪಿಯಲ್ಲಿ ಎರಡು ದಿನಗಳಲ್ಲಿ ಸುರಿದ ದಾಖಲೆ ಪ್ರಮಾಣದ ಮಳೆ ಯಾವೆಲ್ಲ ಅನಾಹುತಗಳನ್ನು ಮಾಡಿದೆ ಅಂದರೆ ಅದನ್ನು ಊಹಿಸೋಕು ಸಾಧ್ಯವಿಲ್ಲ. ಅದಕ್ಕೆ ಒಂದು ಸಣ್ಣ ಉದಾಹರಣೆ ಕಾಪು ಬೀಚ್ ನಲ್ಲಿದ್ದ ಬ್ರಿಟಿಷರ ಕಾಲದ ದೀಪಸ್ತಂಭ ಬಳಿಯ ದೃಶ್ಯ.
ಕಾಪು ಬೀಚ್ ಬಳಿಯ ಲೈಟ್ ಹೌಸ್ ಕನ್ನಡ, ತುಳು ಸಿನಿಮಾ ಚಿತ್ರೀಕರಣಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ತಿದ್ದ ಜಾಗ. ಅಪೂರ್ವ ಸೌಂದರ್ಯದಿಂದ ವೀವ್ ಸ್ಪಾಟ್ ಆಗಿದ್ದ ಕಾಪು ದೀಪಸ್ತಂಭದತ್ತ ಇನ್ನು ಸುಳಿದಾಡುವುದು ಬಿಡಿ. ಅದರ ಬಳಿಗೆ ಹೋಗುವುದೇ ಡೇಂಜರ್ ಅನ್ನುವಂತಾಗಿದೆ. ಯಾಕಂದ್ರೆ, ಎರಡು ದಿನಗಳ ಮಳೆಯಿಂದ ಭೋರ್ಗರೆದ ನದಿಗಳು ಸಮುದ್ರ ಸೇರಲು ಜಾಗ ಸಾಲದೆ ಸಿಕ್ಕ ಸಿಕ್ಕ ಕಡೆಗಳಲ್ಲಿ ಸಮುದ್ರದತ್ತ ನುಗ್ಗಿದೆ. ಲೌಟ್ ಹೌಸ್ ಹಿಂಭಾಗದಿಂದ ಸಮುದ್ರ ಸೇರುತ್ತಿದ್ದ ನದಿ ತನ್ನ ಪಥವನ್ನೇ ಬದಲಿಸಿದ್ದು ದೀಪಸ್ತಂಭದತ್ತ ತೆರಳುವ ಕಾಲುದಾರಿಯನ್ನೇ ಕಬಳಿಸಿಕೊಂಡು ಮುಂಭಾಗದಿಂದ ಹರಿಯಲಾರಂಭಿಸಿದೆ. ಕಾಲು ದಾರಿ ಕೊಚ್ಚಿಹೋಗಿದ್ದು, ಎರಡೂ ಭಾಗಗಳಿಂದ ಸಮುದ್ರ ಕೊರೆತ ಉಂಟಾದಲ್ಲಿ ದೀಪಸ್ತಂಭವೇ ಸಮುದ್ರ ಪಾಲಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಕಾಪು ಬೀಚ್ ನಲ್ಲಿ ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿರುವ ಲೈಟ್ ಹೌಸ್ನ ಹಿಂಭಾಗದಲ್ಲಿ ನದಿ ಸಮುದ್ರ ಸೇರ್ತಾ ಇತ್ತು. ಭಾರೀ ಮಳೆಯಿಂದಾಗಿ ನದಿ ಪಾತ್ರವೇ ಬದಲಾಗಿದ್ದು, ನೆರೆ ನೀರು ತನ್ನ ಪಥವನ್ನೇ ಬದಲಿಸಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಾಪು ಬಳಿಯ ಪಡು ಗ್ರಾಮ, ಗರಡಿ ಪ್ರದೇಶ, ಸುಬ್ಬಯ್ಯ ತೋಟ, ಬೈರು ಗುತ್ತುತೋಟ ಸೇರಿದಂತೆ ಆಸುಪಾಸಿನ ಭಾಗದಲ್ಲಿ ಎಲ್ಲೆಂದರಲ್ಲಿ ಹರಿಯುತ್ತಿರುವ ನದಿ ನೀರು ಲೈಟ್ ಹೌಸ್ ಮುಂಭಾಗದಿಂದಲೇ ಸಮುದ್ರ ಸೇರುತ್ತಿದೆ. ಇದರಿಂದ ದೀಪಸ್ತಂಭದತ್ತ ಹೋಗಲು ದಾರಿ ಇಲ್ಲದಾಗಿದ್ದು, ಅಲ್ಲದೆ ನೆರೆನೀರು ಇದೇ ರೀತಿ ಹರಿದರೆ ಲೈಟ್ ಹೌಸ್ ಏರುವ ಮೆಟ್ಟಲುಗಳು ಕೊಚ್ಚಿ ಹೋಗುವ ಸಾಧ್ಯತೆ ಇದೆ.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm