ಬ್ರೇಕಿಂಗ್ ನ್ಯೂಸ್
14-03-22 02:20 pm Mangalore Correspondent ಕರಾವಳಿ
ಮಂಗಳೂರು, ಮಾ.14: ಎರಡು ದಿನಗಳ ಕರಾವಳಿ ಪ್ರವಾಸದ ನಿಮಿತ್ತ ಮಂಗಳೂರಿಗೆ ಆಗಮಿಸಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ದೇಗುಲದ ಆಡಳಿತ ಮಂಡಳಿ ಸದಸ್ಯರು ರಾಜ್ಯಪಾಲರನ್ನು ಬರಮಾಡಿಕೊಂಡು ಸ್ವಾಗತಿಸಿದರು.
ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿ, ಆರತಿ ಸ್ವೀಕರಿಸಿದರು. ಶಿಷ್ಟಚಾರ ಪ್ರಕಾರ, ಜಿಲ್ಲಾ ಮಟ್ಟದ ಅಧಿಕಾರಿಗಳು ಜೊತೆಗಿದ್ದರು. ದೇವರ ದರ್ಶನದ ಬಳಿಕ ದೇವಸ್ಥಾನದ ಟ್ರಸ್ಟಿಗಳು ರಾಜ್ಯಪಾಲರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಇದೇ ವೇಳೆ, ದೇಗುಲದ ಅಭಿವೃದ್ಧಿಯ ರೂವಾರಿ ಮಾಜಿ ಸಚಿವ ಜನಾರ್ದನ ಪೂಜಾರಿಯವರ ಆತ್ಮಚರಿತ್ರೆ ಪುಸ್ತಕವನ್ನು ಅವರಿಗೆ ನೀಡಲಾಯಿತು. ದೇವಸ್ಥಾನದ ಪ್ರವಾಸಿಗರ ಸಂದರ್ಶನದ ಪುಸ್ತಕದಲ್ಲಿ ಸಹಿ ಹಾಕಿ, ಅಲ್ಲಿಂದ ಸರ್ಕಿಟ್ ಹೌಸ್ ಗೆ ನಿರ್ಗಮಿಸಿದರು.






ಮಧ್ಯಾಹ್ನ 2.45ಕ್ಕೆ ರಾಜ್ಯಪಾಲರು ಮಂಗಳೂರಿನಿಂದ ಮೂಡುಬಿದ್ರೆಯ ಸಾವಿರ ಕಂಬದ ಬಸದಿಗೆ ಭೇಟಿ ನೀಡಲಿದ್ದಾರೆ. ಅಲ್ಲಿಂದ ನಾಲ್ಕು ಗಂಟೆಗೆ ಕೊಡ್ಯಡ್ಕ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಆನಂತರ ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಕಳ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಎಂಟು ಗಂಟೆಗೆ ಅಲ್ಲಿಂದ ಮರಳಿ ಮಂಗಳೂರಿಗೆ ಬರಲಿದ್ದು ಸರ್ಕಿಟ್ ಹೌಸ್ ನಲ್ಲಿ ರಾತ್ರಿ ತಂಗಲಿದ್ದಾರೆ. ಮಾ.15ರಂದು ಬೆಳಗ್ಗೆ ಹತ್ತು ಗಂಟೆಗೆ ಬಜ್ಪೆ ವಿಮಾನ ನಿಲ್ದಾಣದ ಮೂಲಕ ಬೆಂಗಳೂರು ತಲುಪಲಿದ್ದಾರೆ.
Governor of Karnataka Thawar Chand Gehlot is touring Dakshina Kannada (DK) and Udupi districts on March 14 and 15.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm