ಬ್ರೇಕಿಂಗ್ ನ್ಯೂಸ್
15-03-22 06:41 pm Udupi Correspondent ಕರಾವಳಿ
ಉಡುಪಿ, ಮಾ.15: ಹೈಕೋರ್ಟ್ ತೀರ್ಪಿನಿಂದ ನಮಗೆ ಆಘಾತವಾಗಿದೆ. ಹಿಜಾಬ್ ಹಕ್ಕಿಗಾಗಿ ನಮ್ಮ ಹೋರಾಟ ನಿಲ್ಲೋದಿಲ್ಲ. ನಾವು ನಮ್ಮ ಕೈಲಾದಷ್ಟು ಹೋರಾಟ ಮಾಡುತ್ತೇವೆ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ಉಡುಪಿ ಸರಕಾರಿ ಕಾಲೇಜಿನ ಆರು ಮಂದಿ ವಿದ್ಯಾರ್ಥಿನಿಯರು ಹೇಳಿದ್ದಾರೆ.
ಹೈಕೋರ್ಟ್ ತೀರ್ಪಿನ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ವಿದ್ಯಾರ್ಥಿನಿಯರು, ನಮಗೆ ಶಿಕ್ಷಣವೂ ಮುಖ್ಯ. ನಮ್ಮ ಧರ್ಮದ ಹಿಜಾಬ್ ಕೂಡ ಅಷ್ಟೇ ಮುಖ್ಯ. ಶಿಕ್ಷಣ ಪಡೆಯುತ್ತೇವೆ, ಹಾಗೆಂದು ಹಿಜಾಬ್ ತೆಗೆಯಲ್ಲ. ನಾವು ಹಿಜಾಬ್ ಇಲ್ಲದೇ ತರಗತಿಗೆ ಹೋಗೋದಿಲ್ಲ. ಹಿಜಾಬ್ ಧರಿಸಲು ಅವಕಾಶ ಕೊಟ್ಟರೆ ಪರೀಕ್ಷೆ ಬರೆಯುತ್ತೇವೆ. ಇಲ್ಲದಿದ್ದರೆ ದೂರ ಉಳಿಯುತ್ತೇವೆ ಎಂದು ಹಿಜಾಬ್ ಧರಿಸಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದ ವಿದ್ಯಾರ್ಥಿನಿಯರು ಹೇಳಿಕೆ ನೀಡಿದ್ದಾರೆ.

ಹಿಜಾಬ್ ಇಲ್ಲದೇ ಕ್ಲಾಸ್ಗೆ ಹೋಗಲ್ಲ. ಸಂವಿಧಾನದ ಮೇಲೆ ನಮಗೆ ತುಂಬಾ ಭರವಸೆ ಇತ್ತು. ನಾವು ಮುಂದೆಯೂ ಹಿಜಾಬಿಗಾಗಿ ಹೋರಾಟ ಮಾಡುತ್ತೇವೆ. ಖುರಾನ್ನಲ್ಲಿ ಹಿಜಾಬ್ ಹಾಕಬೇಕು ಅಂತ ಹೇಳಿದೆ. ಅದಕ್ಕಾಗಿ ಕಷ್ಟ ಪಡುತ್ತಿದ್ದೇವೆ, ಕೈಲಾದಷ್ಟು ಫೈಟ್ ಮಾಡ್ತೇವೆ. ನಮಗೆ ಹಿಜಾಬ್ ಬೇಕು, ಜೊತೆಗೆ ಶಿಕ್ಷಣ ಕೂಡ ಬೇಕು. ಹಿಜಾಬ್ಗೆ ಅವಕಾಶ ಕೊಟ್ಟರೆ ಮಾತ್ರ ಪರೀಕ್ಷೆ ಬರೆಯುತ್ತೇವೆ ಎಂದು ಹೇಳಿದ್ದಾರೆ.
ಕೆಲವರು ರಾಜಕೀಯ ಲಾಭಕ್ಕಾಗಿ ಹಿಜಾಬ್ ವಿವಾದ ಸೃಷ್ಟಿ ಮಾಡಿದ್ದಾರೆ. ಇದರಿಂದ ಅದೆಷ್ಟೋ ವಿದ್ಯಾರ್ಥಿನಿಯರ ಶಿಕ್ಷಣ ಹಾಳಾಗುತ್ತಿದೆ. ಆವತ್ತು ಕ್ಲಾಸ್ ಒಳಗೆ ಬಿಟ್ಟಿದ್ರೆ ಇಷ್ಟು ದೊಡ್ಡದಾಗಿ ಆಗುತ್ತಿರಲಿಲ್ಲ. ನಾವು ಎಂದಿಗೂ ನಮ್ಮ ವಿದ್ಯಾಭ್ಯಾಸ ಕೊನೆಗೊಳಿಸುವುದಿಲ್ಲ. ಸುಪ್ರೀಂ ಕೋರ್ಟ್ ಹೋಗುವ ಬಗ್ಗೆ ಮುಂದೆ ನಿರ್ಧರಿಸುತ್ತೇವೆ ಎಂದು ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಅರ್ಜಿದಾರ ವಿದ್ಯಾರ್ಥಿನಿಯರು ಹೇಳಿದ್ದಾರೆ.
The Udupi Muslim girls whose petitions seeking permission to wear Hijab inside the classrooms were dismissed by the Karnataka High Court said on Tuesday they will not go to college without hijab and fight the case legally till they get “justice”.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am