ಕುತ್ತಾರು ; ಪ್ರೇಮವೈಫಲ್ಯಕ್ಕೆ ಹದಿಹರೆಯದ ಯುವಕ ಸಾವಿಗೆ ಶರಣು 

16-03-22 10:53 am       Mangalore Correspondent   ಕರಾವಳಿ

ಪ್ರೇಮ ವೈಫಲ್ಯದಿಂದ ಬೇಸತ್ತ ಹದಿಹರೆಯದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುತ್ತಾರು ಸಂತೋಷ್ ನಗರ ಎಂಬಲ್ಲಿ ನಡೆದಿದೆ.

ಉಳ್ಳಾಲ, ಮಾ.16 : ಪ್ರೇಮ ವೈಫಲ್ಯದಿಂದ ಬೇಸತ್ತ ಹದಿಹರೆಯದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುತ್ತಾರು ಸಂತೋಷ್ ನಗರ ಎಂಬಲ್ಲಿ ನಡೆದಿದೆ.

ದೀಕ್ಷಿತ್ (19) ಆತ್ಮಹತ್ಯೆಗೈದ ಯುವಕ. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮೂಲತಃ ಕಂಕನಾಡಿ ಬೈಪಾಸ್ ನ ಕದ್ಕೋರಿ ಗುಡ್ಡೆಯ ದೀಕ್ಷಿತ್ ಕುಟುಂಬ ಕೆಲ ಸಮಯದಿಂದ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದೀಕ್ಷಿತ್ ನಿನ್ನೆ‌ ಸಂಜೆ ತಾಯಿಯೊಂದಿಗೆ ಕುತ್ತಾರಿನ ಸಂಬಂಧಿಕರ ಮನೆಯಲ್ಲಿದ್ದು ಈ ವೇಳೆ ಮನೆಗೆ ಹೋಗಿ ಬರುತ್ತೇನೆಂದು ಓರ್ವನೇ ಸಂತೋಷ್ ನಗರದ ಬಾಡಿಗೆ ಮನೆಗೆ ತೆರಳಿದ್ದನಂತೆ. ಬಳಿಕ ಮನೆಯ ಕೋಣೆಯ ಸಿಲಿಂಗ್ ಫ್ಯಾನಿಗೆ ದೀಕ್ಷಿತ್ ನೇಣು ಬಿಗಿದು ಆತ್ಮ ಹತ್ಯೆಗೈದಿರುವುದು ರಾತ್ರಿ ವೇಳೆ ಕಂಡುಬಂದಿದೆ. ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗುತ್ತಿದೆ.

ಮೃತ ದೀಕ್ಷಿತ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದು ತಾಯಿ, ಸಹೋದರನನ್ನು ಅಗಲಿದ್ದಾನೆ.

Mangalore Love failure 19 year old boy commits suicide in Kuttar. The deceased has been identified as Deekshith. Deekshith and Mother had been to their relatives house and deekshith who went to the room was found hanging.