ಬ್ರೇಕಿಂಗ್ ನ್ಯೂಸ್
16-03-22 12:56 pm Udupi Correspondent ಕರಾವಳಿ
ಕುಂದಾಪುರ, ಮಾ.16 : ಹಿಜಾಬ್ ವಿಚಾರದಲ್ಲಿ ತೀವ್ರ ಗದ್ದಲ ಎಬ್ಬಿಸಿದ್ದ ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ಹೈಕೋರ್ಟ್ ಆದೇಶದ ಬಳಿಕ ಕಾಲೇಜು ಆರಂಭಗೊಂಡಿದ್ದು, 11 ಮಂದಿ ಕಾಲೇಜಿಗೆ ಗೈರಾಗಿದ್ದಾರೆ.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಾ.15ರ ಮಂಗಳವಾರ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಇದರ ಬೆನ್ನಲ್ಲೇ ಶಾಲೆ, ಕಾಲೇಜು ಆವರಣದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ, 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇಂದು ಬೆಳಗ್ಗೆ ಕಾಲೇಜಿಗೆ ವಿದ್ಯಾರ್ಥಿಗಳು ಆಗಮಿಸಿದ್ದು ಹಿಜಾಬ್ ಹಾಕಿದವರನ್ನು ತೆಗೆದು ಒಳಬರುವಂತೆ ಸೂಚಿಸಲು ಸಿಬಂದಿ ಮತ್ತು ಕಾಲೇಜಿನ ಉಪನ್ಯಾಸಕರು ತೊಡಗಿದ್ದರು. ಈ ವೇಳೆ, ಇಬ್ಬರು ಮುಸ್ಲಿಮ್ ವಿದ್ಯಾರ್ಥಿನಿಯರು ಹಿಜಾಬ್, ಬುರ್ಖಾ ಧರಿಸಿ ಕಾಲೇಜಿಗೆ ಬಂದಿದ್ದು, ಬಳಿಕ ಪ್ರತ್ಯೇಕ ಕೊಠಡಿಯಲ್ಲಿ ತೆರಳಿ ಹಿಜಾಬ್, ಬುರ್ಖಾ ತೆಗೆದಿಟ್ಟು ತರಗತಿಗೆ ತೆರಳಿದ್ದಾರೆ. ಕುಂದಾಪುರದಲ್ಲಿ ಹಿಜಾಬ್ ಸಂಘರ್ಷದ ಸಂದರ್ಭದಲ್ಲಿ 22 ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ದೂರ ನಿಂತಿದ್ದರು. ಈಗ ಅವರ ಸಂಖ್ಯೆ ಕಡಿಮೆಯಾಗಿದ್ದು, ಹೈಕೋರ್ಟ್ ತೀರ್ಪನ್ನು ಪಾಲಿಸುವ ಸೂಚನೆ ನೀಡಿದ್ದಾರೆ.
ಉಡುಪಿಯ ಸರಕಾರಿ ಕಾಲೇಜಿನಲ್ಲಿ ಹಿಜಾಬ್ ಗಾಗಿ ಪಟ್ಟು ಹಿಡಿದು ಕಾಲೇಜಿನಿಂದ ಹೊರಗೆ ನಿಂತಿದ್ದ ಆರು ಮಂದಿ ವಿದ್ ವಿದ್ಯಾರ್ಥಿನಿಯರು ಕಾಲೇಜಿಗೆ ಬರದೆ ಶಿಕ್ಷಣದಿಂದ ದೂರ ನಿಂತಿದ್ದಾರೆ. ಈ ಪೈಕಿ ಒಬ್ಬಾಕೆಯ ಹೆಸರಲ್ಲಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆಯಾಗಿದ್ದು, ತುರ್ತಾಗಿ ಅರ್ಜಿ ಪರಿಗಣಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದ್ದಾರೆ.
Students remove hijab and attend class in Kundapur, 11 others absent.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm