ಬ್ರೇಕಿಂಗ್ ನ್ಯೂಸ್
18-03-22 02:17 pm Mangalore Correspondent ಕರಾವಳಿ
ಮಂಗಳೂರು, ಮಾ.18 : ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕದ್ರಿ ಸಂಚಾರಿ ಠಾಣೆಯ ಎಎಸ್ಐ ಸದಾಶಿವ(58) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸೋಮವಾರ ರಾತ್ರಿ ಹತ್ತು ಗಂಟೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕದ್ರಿ ಕಡೆಯಿಂದ ಕೊಟ್ಟಾರ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಕುಂಟಿಕಾನದಲ್ಲಿ ಎದುರಿನಿಂದ ಸಾಗುತ್ತಿದ್ದ ರೋಡ್ ರೋಲರ್ ಗೆ ಡಿಕ್ಕಿಯಾಗಿದ್ದಾರೆ. ಇದರಿಂದ ತಲೆಯ ಭಾಗಕ್ಕೆ ತೀವ್ರ ಏಟು ತಗಲಿ ರಕ್ತಸ್ರಾವ ಆಗಿದ್ದ ಸದಾಶಿವ ಅವರನ್ನು ಕೂಡಲೇ ಎಜೆ ಎಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸದಾಶಿವ ಅವರು ಕಾವೂರಿನ ಪಂಜಿಮೊಗರಿನ ನಿವಾಸಿಯಾಗಿದ್ದು, ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ. ಪುತ್ರ ಎನ್ಐಟಿಕೆ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾನೆ. ಸದಾಶಿವ ಅವರು ಪೊಲೀಸ್ ಇಲಾಖೆಗೆ ಸೇರಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ರೋಡ್ ರೋಲರನ್ನು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸಲು ಅವಕಾಶ ಇಲ್ಲ. ಅದರಲ್ಲಿ ಮೇಲ್ಭಾಗದಲ್ಲಿ ಮಾತ್ರ ಸಣ್ಣ ಲೈಟ್ ಇರುವುದರಿಂದ ವೇಗವಾಗಿ ಸಾಗುವ ವಾಹನಗಳಿಗೆ ಎದುರಿನ ವಾಹನ ಕಾಣುವುದಿಲ್ಲ. ಇದೇ ಕಾರಣದಿಂದ ಅಪಘಾತ ಆಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಎಸಿಪಿ ನಟರಾಜ್ ತಿಳಿಸಿದ್ದಾರೆ.
Mangalore Kadri traffic ASI dies after accident. The deceased has been identified as Sadashiva.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am