ಬ್ರೇಕಿಂಗ್ ನ್ಯೂಸ್
18-03-22 02:17 pm Mangalore Correspondent ಕರಾವಳಿ
ಮಂಗಳೂರು, ಮಾ.18 : ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕದ್ರಿ ಸಂಚಾರಿ ಠಾಣೆಯ ಎಎಸ್ಐ ಸದಾಶಿವ(58) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸೋಮವಾರ ರಾತ್ರಿ ಹತ್ತು ಗಂಟೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕದ್ರಿ ಕಡೆಯಿಂದ ಕೊಟ್ಟಾರ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ, ಕುಂಟಿಕಾನದಲ್ಲಿ ಎದುರಿನಿಂದ ಸಾಗುತ್ತಿದ್ದ ರೋಡ್ ರೋಲರ್ ಗೆ ಡಿಕ್ಕಿಯಾಗಿದ್ದಾರೆ. ಇದರಿಂದ ತಲೆಯ ಭಾಗಕ್ಕೆ ತೀವ್ರ ಏಟು ತಗಲಿ ರಕ್ತಸ್ರಾವ ಆಗಿದ್ದ ಸದಾಶಿವ ಅವರನ್ನು ಕೂಡಲೇ ಎಜೆ ಎಸ್ಪತ್ರೆಗೆ ದಾಖಲಿಸಲಾಗಿತ್ತು.
ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಸದಾಶಿವ ಅವರು ಕಾವೂರಿನ ಪಂಜಿಮೊಗರಿನ ನಿವಾಸಿಯಾಗಿದ್ದು, ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ. ಪುತ್ರ ಎನ್ಐಟಿಕೆ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದಾನೆ. ಸದಾಶಿವ ಅವರು ಪೊಲೀಸ್ ಇಲಾಖೆಗೆ ಸೇರಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.
ರೋಡ್ ರೋಲರನ್ನು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸಲು ಅವಕಾಶ ಇಲ್ಲ. ಅದರಲ್ಲಿ ಮೇಲ್ಭಾಗದಲ್ಲಿ ಮಾತ್ರ ಸಣ್ಣ ಲೈಟ್ ಇರುವುದರಿಂದ ವೇಗವಾಗಿ ಸಾಗುವ ವಾಹನಗಳಿಗೆ ಎದುರಿನ ವಾಹನ ಕಾಣುವುದಿಲ್ಲ. ಇದೇ ಕಾರಣದಿಂದ ಅಪಘಾತ ಆಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಎಸಿಪಿ ನಟರಾಜ್ ತಿಳಿಸಿದ್ದಾರೆ.
Mangalore Kadri traffic ASI dies after accident. The deceased has been identified as Sadashiva.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm