ಬ್ರೇಕಿಂಗ್ ನ್ಯೂಸ್
22-09-20 03:02 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 22: ಕೊನೆಗೂ ಕರಾವಳಿಯ ಹೆಮ್ಮೆಯ ಸಾಧಕ, ವಿಜಯ ಬ್ಯಾಂಕಿನ ಔನ್ನತ್ಯಕ್ಕೆ ಕಾರಣರಾಗಿದ್ದ ಮುಲ್ಕಿ ಸುಂದರರಾಮ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಗೌರವ ನೀಡಿದೆ. ಮೂರು ವರ್ಷಗಳ ಹಿಂದೆ ಜಟಾಪಟಿಗೆ ಕಾರಣವಾಗಿದ್ದ ಸುಂದರ ರಾಮ ಶೆಟ್ಟರ ಹೆಸರಿನಲ್ಲಿ ಮಂಗಳೂರಿನಲ್ಲಿ ರಸ್ತೆ ನಾಮಕರಣ ಮಾಡುವುದಕ್ಕೆ ನಗರಾಭಿವೃದ್ಧಿ ಸಚಿವಾಲಯ ಒಪ್ಪಿಕೊಂಡಿದ್ದು ಹಿಂದಿನ ಆದೇಶವನ್ನು ಮರು ಜಾರಿಗೆ ಸೂಚನೆ ನೀಡಿದೆ.

ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ, ಲೈಟ್ ಹೌಸ್ ಹಿಲ್ ಬಳಿಯ ಕೆಥೋಲಿಕ್ ಕ್ಲಬ್ ವರೆಗಿನ ರಸ್ತೆಗೆ ಸುಂದರರಾಮ ಶೆಟ್ಟಿ ಹೆಸರು ನಾಮಕರಣ ಮಾಡಲು 2017ರ ಮೇ 24ರಂದು ಆಗಿನ ರಾಜ್ಯ ಸರಕಾರ ಆದೇಶ ಮಾಡಿತ್ತು. ಆದರೆ, ಕೊನೆಕ್ಷಣದಲ್ಲಿ ಎಚ್ಚತ್ತುಕೊಂಡ ಅಲೋಶಿಯಸ್ ಕಾಲೇಜು ಆಡಳಿತ, ಆಗ ಮಂಗಳೂರು ಶಾಸಕರಾಗಿದ್ದ ಜೆ.ಆರ್ ಲೋಬೊ ಮೂಲಕ ಕೋರ್ಟಿನಿಂದ ತಡೆಯಾಜ್ಞೆ ತಂದಿತ್ತು. ಅಲ್ಲದೆ, ರಸ್ತೆಗೆ ಸುಂದರರಾಮ ಶೆಟ್ಟಿ ಹೆಸರಿಡುವುದಕ್ಕೆ ಆಕ್ಷೇಪ ಸೂಚಿಸಿ ವಿದ್ಯಾರ್ಥಿಗಳ ಮೂಲಕ ಪ್ರತಿಭಟನೆಯನ್ನೂ ನಡೆಸಲಾಗಿತ್ತು. ಈ ವಿಚಾರ ಮಂಗಳೂರಿನಲ್ಲಿ ಕಾಂಗ್ರೆಸ್ - ಬಿಜೆಪಿ ಮಧ್ಯೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು. ಬಂಟ ಸಮುದಾಯಕ್ಕೆ ಅವಮಾನ ಎಂಬ ನೆಲೆಯಲ್ಲಿ ಪ್ರಚಾರವನ್ನೂ ನಡೆಸಲಾಗಿತ್ತು. ಬಳಿಕ ಕೋರ್ಟ್ ಮತ್ತು ಮಹಾನಗರ ಪಾಲಿಕೆಯಲ್ಲಿ ಜಟಾಪಟಿ ನಡೆದು ಪ್ರಕ್ರಿಯೆ ನೆನೆಗುದಿಗೆ ಬಿದ್ದಿತ್ತು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರಕಾರ ಬಂದರೆ ಒಂದೇ ತಿಂಗಳಲ್ಲಿ ರಸ್ತೆ ನಾಮಕರಣ ಮಾಡಿಸುವುದಾಗಿ ಮಾಜಿ ಸಚಿವ ನಾಗರಾಜ ಶೆಟ್ಟಿ ಕೊಚ್ಚಿಕೊಂಡಿದ್ದೂ ಆಗಿತ್ತು. ಆನಂತರ ಕೋರ್ಟಿನಲ್ಲಿ ವಾದ - ವಿವಾದ ನಡೆದಿದ್ದು ಮಹಾನಗರ ಪಾಲಿಕೆ ಕಮಿಷನರ್ ಅವರ ಅಭಿಪ್ರಾಯವನ್ನೂ ಕೇಳಲಾಗಿತ್ತು. ಎರಡೂ ಕಡೆಯ ವಾದ ಆಲಿಸಿದ ರಾಜ್ಯ ಹೈಕೋರ್ಟ್, 2019ರ ಎಪ್ರಿಲ್ 11 ರಂದು ಈ ಬಗ್ಗೆ ಪುನರ್ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿತ್ತು.
ಈಗ ದಿಢೀರ್ ಆಗಿ ಎಚ್ಚತ್ತ ರಾಜ್ಯದ ಬಿಜೆಪಿ ಸರಕಾರ, ಇತ್ತೀಚೆಗೆ 2020ರ ಸೆಪ್ಟಂಬರ್ 5 ರಂದು ಹಳೆಯ ಆದೇಶವನ್ನು ಊರ್ಜಿತಗೊಳಿಸಿ ನಗರಾಭಿವೃದ್ಧಿ ಸಚಿವಾಲಯದ ಮೂಲದ ಆದೇಶ ಮಾಡಿಸಿದೆ. ಅಲ್ಲಿಗೆ ಎರಡು ಸಮುದಾಯಗಳ ನಡುವಿನ ಪ್ರತಿಷ್ಠೆಗೆ ಕಾರಣವಾಗಿದ್ದ ರಸ್ತೆ ನಾಮಕರಣ ವಿವಾದಕ್ಕೆ ಇತಿಶ್ರೀ ಹಾಕಲಾಗಿದೆ.
Join our WhatsApp group for latest news updates
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am