ಬ್ರೇಕಿಂಗ್ ನ್ಯೂಸ್
22-09-20 03:02 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 22: ಕೊನೆಗೂ ಕರಾವಳಿಯ ಹೆಮ್ಮೆಯ ಸಾಧಕ, ವಿಜಯ ಬ್ಯಾಂಕಿನ ಔನ್ನತ್ಯಕ್ಕೆ ಕಾರಣರಾಗಿದ್ದ ಮುಲ್ಕಿ ಸುಂದರರಾಮ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಗೌರವ ನೀಡಿದೆ. ಮೂರು ವರ್ಷಗಳ ಹಿಂದೆ ಜಟಾಪಟಿಗೆ ಕಾರಣವಾಗಿದ್ದ ಸುಂದರ ರಾಮ ಶೆಟ್ಟರ ಹೆಸರಿನಲ್ಲಿ ಮಂಗಳೂರಿನಲ್ಲಿ ರಸ್ತೆ ನಾಮಕರಣ ಮಾಡುವುದಕ್ಕೆ ನಗರಾಭಿವೃದ್ಧಿ ಸಚಿವಾಲಯ ಒಪ್ಪಿಕೊಂಡಿದ್ದು ಹಿಂದಿನ ಆದೇಶವನ್ನು ಮರು ಜಾರಿಗೆ ಸೂಚನೆ ನೀಡಿದೆ.

ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ, ಲೈಟ್ ಹೌಸ್ ಹಿಲ್ ಬಳಿಯ ಕೆಥೋಲಿಕ್ ಕ್ಲಬ್ ವರೆಗಿನ ರಸ್ತೆಗೆ ಸುಂದರರಾಮ ಶೆಟ್ಟಿ ಹೆಸರು ನಾಮಕರಣ ಮಾಡಲು 2017ರ ಮೇ 24ರಂದು ಆಗಿನ ರಾಜ್ಯ ಸರಕಾರ ಆದೇಶ ಮಾಡಿತ್ತು. ಆದರೆ, ಕೊನೆಕ್ಷಣದಲ್ಲಿ ಎಚ್ಚತ್ತುಕೊಂಡ ಅಲೋಶಿಯಸ್ ಕಾಲೇಜು ಆಡಳಿತ, ಆಗ ಮಂಗಳೂರು ಶಾಸಕರಾಗಿದ್ದ ಜೆ.ಆರ್ ಲೋಬೊ ಮೂಲಕ ಕೋರ್ಟಿನಿಂದ ತಡೆಯಾಜ್ಞೆ ತಂದಿತ್ತು. ಅಲ್ಲದೆ, ರಸ್ತೆಗೆ ಸುಂದರರಾಮ ಶೆಟ್ಟಿ ಹೆಸರಿಡುವುದಕ್ಕೆ ಆಕ್ಷೇಪ ಸೂಚಿಸಿ ವಿದ್ಯಾರ್ಥಿಗಳ ಮೂಲಕ ಪ್ರತಿಭಟನೆಯನ್ನೂ ನಡೆಸಲಾಗಿತ್ತು. ಈ ವಿಚಾರ ಮಂಗಳೂರಿನಲ್ಲಿ ಕಾಂಗ್ರೆಸ್ - ಬಿಜೆಪಿ ಮಧ್ಯೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿತ್ತು. ಬಂಟ ಸಮುದಾಯಕ್ಕೆ ಅವಮಾನ ಎಂಬ ನೆಲೆಯಲ್ಲಿ ಪ್ರಚಾರವನ್ನೂ ನಡೆಸಲಾಗಿತ್ತು. ಬಳಿಕ ಕೋರ್ಟ್ ಮತ್ತು ಮಹಾನಗರ ಪಾಲಿಕೆಯಲ್ಲಿ ಜಟಾಪಟಿ ನಡೆದು ಪ್ರಕ್ರಿಯೆ ನೆನೆಗುದಿಗೆ ಬಿದ್ದಿತ್ತು. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಸರಕಾರ ಬಂದರೆ ಒಂದೇ ತಿಂಗಳಲ್ಲಿ ರಸ್ತೆ ನಾಮಕರಣ ಮಾಡಿಸುವುದಾಗಿ ಮಾಜಿ ಸಚಿವ ನಾಗರಾಜ ಶೆಟ್ಟಿ ಕೊಚ್ಚಿಕೊಂಡಿದ್ದೂ ಆಗಿತ್ತು. ಆನಂತರ ಕೋರ್ಟಿನಲ್ಲಿ ವಾದ - ವಿವಾದ ನಡೆದಿದ್ದು ಮಹಾನಗರ ಪಾಲಿಕೆ ಕಮಿಷನರ್ ಅವರ ಅಭಿಪ್ರಾಯವನ್ನೂ ಕೇಳಲಾಗಿತ್ತು. ಎರಡೂ ಕಡೆಯ ವಾದ ಆಲಿಸಿದ ರಾಜ್ಯ ಹೈಕೋರ್ಟ್, 2019ರ ಎಪ್ರಿಲ್ 11 ರಂದು ಈ ಬಗ್ಗೆ ಪುನರ್ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಿತ್ತು.
ಈಗ ದಿಢೀರ್ ಆಗಿ ಎಚ್ಚತ್ತ ರಾಜ್ಯದ ಬಿಜೆಪಿ ಸರಕಾರ, ಇತ್ತೀಚೆಗೆ 2020ರ ಸೆಪ್ಟಂಬರ್ 5 ರಂದು ಹಳೆಯ ಆದೇಶವನ್ನು ಊರ್ಜಿತಗೊಳಿಸಿ ನಗರಾಭಿವೃದ್ಧಿ ಸಚಿವಾಲಯದ ಮೂಲದ ಆದೇಶ ಮಾಡಿಸಿದೆ. ಅಲ್ಲಿಗೆ ಎರಡು ಸಮುದಾಯಗಳ ನಡುವಿನ ಪ್ರತಿಷ್ಠೆಗೆ ಕಾರಣವಾಗಿದ್ದ ರಸ್ತೆ ನಾಮಕರಣ ವಿವಾದಕ್ಕೆ ಇತಿಶ್ರೀ ಹಾಕಲಾಗಿದೆ.
Join our WhatsApp group for latest news updates
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm