ಬ್ರೇಕಿಂಗ್ ನ್ಯೂಸ್
26-03-22 11:01 am Mangalore Correspondent ಕರಾವಳಿ
ಉಳ್ಳಾಲ, ಮಾ.26: ಸ್ಕೂಟರ್ ಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮಹಿಳೆ ದಾರುಣ ಸಾವನ್ನಪ್ಪಿದ ಘಟನೆ ರಾ.ಹೆ. 66 ರ ಕಾಪಿಕಾಡು ಎಂಬಲ್ಲಿ ನಡೆದಿದ್ದು, ಹಿಟ್ & ರನ್ ನಡೆಸಿದ ಕಾರಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ತೊಕ್ಕೊಟ್ಟು ಸಮೀಪದ ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ಬಳಿಯ ಪ್ರತಿಷ್ಠಿತ ಜಾನ್ ಬೇಕರಿ ಕುಟುಂಬದ ಎಮಿಲ್ಡಾ ಡಿಸೋಜ (59) ಮೃತ ಮಹಿಳೆ. ಇಂದು ಮೊಮ್ಮಗಳ ಹುಟ್ಟುಹಬ್ಬ ಆಚರಣೆ ಇದ್ದ ಕಾರಣ ಎಮಿಲ್ಡ ಅವರು ಬೆಳ್ಳಂಬೆಳಗ್ಗೆ ತೊಕ್ಕೊಟ್ಟು ಚರ್ಚ್ ಗೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಹಿಂತಿರುಗಿದ್ದರು. ಅರ್ಧ ದಾರಿಯ ವರೆಗೂ ಸಂಬಂಧಿಕರ ಜತೆಗೆ ನಡೆದುಕೊಂಡೇ ಬರುತ್ತಿದ್ದ ಅವರನ್ನ ಪ್ಲೇವಿ ಡಿಸೋಜ ಎಂಬ ಪರಿಚಯಸ್ಥ ಮಹಿಳೆ ತನ್ನ ಆಕ್ಟಿವಾ ಸ್ಕೂಟರಿಗೆ ಹತ್ತಿಸಿದ್ದಾರೆ.


ಸ್ಕೂಟರ್ ಕಾಪಿಕಾಡು ರಾಜ್ ಕೇಟರರ್ಸ್ ಬಳಿ ತಲುಪುತ್ತಿದ್ದಂತೆ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು ಹಿಂಬದಿ ಸವಾರೆ ಎಮಿಲ್ಡ ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ತಕ್ಷಣ ಅವರನ್ನ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಸವಾರೆ ಪ್ಲೇವಿ ಡಿ ಸೋಜ(47) ಅವರು ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



ಮನೆಯಲ್ಲಿ ಮೊಮ್ಮಗುವಿನ ಹುಟ್ಟುಹಬ್ಬಕ್ಕಾಗಿ ಎಮಿಲ್ಡ ಅವರು ಇಡ್ಲಿಗಳನ್ನ ತರಿಸಿ ಊಟಕ್ಕೆ ತಯಾರಿ ನಡೆಸಿದ್ದರಂತೆ. ಮೊಮ್ಮಗಳ ಹುಟ್ಟುಹಬ್ಬದ ದಿವಸವೇ ಎಮಿಲ್ಡ ಅವರು ಇಹಲೋಕ ತ್ಯಜಿಸಿದ್ದು ಕುಟುಂಬ ವರ್ಗದವರನ್ನ ಶೋಕದಲ್ಲಿ ಮುಳುಗಿಸಿದೆ. ಮೃತ ಎಮಿಲ್ಡ ಅವರು ಪತಿ, ಪುತ್ರ, ಪುತ್ರಿ, ಮೊಮ್ಮಕ್ಕಳನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Mangalore hit and run accident at Ullal 59-year-old woman pillon rider killed on the spot. The deceased has been identified as Emeld Dsouza. As it was a granddaughters birthday she was on her way to the church during which an unknown car rammed their two-wheeler where Emeld was seriously hurt and died on spot.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm