ಬ್ರೇಕಿಂಗ್ ನ್ಯೂಸ್
28-03-22 05:52 pm Mangalore Correspondent ಕರಾವಳಿ
ಉಳ್ಳಾಲ, ಮಾ.28 : ಉಚ್ಚಿಲ ಬಟ್ಟಂಪಾಡಿ ಸಮುದ್ರ ತೀರದಲ್ಲಿ ಪ್ರವಾಸೋದ್ಯಮದ ಸೋಗಲ್ಲಿ ಖಾಸಗಿ ವ್ಯಕ್ತಿಗಳು ಹಗಲು ದರೋಡೆ ನಡೆಸುತ್ತಿದ್ದು ಫ್ರೀ ವೆಡ್ಡಿಂಗ್ ಶೂಟ್ ಗೆ ಬಂದಿದ್ದ ಜೋಡಿಯಿಂದ ದಂಡದ ರೂಪದಲ್ಲಿ 5 ಸಾವಿರ ರೂ. ಲೂಟಿ ಹೊಡೆದಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಇದಕ್ಕೆಲ್ಲ ಕಡಿವಾಣ ಹಾಕಬೇಕಿದ್ದ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಾಣ ಮೌನಕ್ಕೆ ಜಾರಿದೆ.
ಬಟ್ಟಂಪಾಡಿಯಲ್ಲಿ ಹೊಳೆ ಸೇರುವ ಬೀಚ್ ಪರಿಸರವನ್ನ ಪ್ರವಾಸೋದ್ಯಮ ಇಲಾಖೆ ಮುಂಬೈ ಮೂಲದ ಖಾಸಗಿ ಕಂಪನಿಗೆ ನಿರ್ವಹಣೆಗಾಗಿ ಲೀಸ್ ನೀಡಿದೆ. ಬೀಚ್ ನಿರ್ವಹಣೆ ನೆಪದಲ್ಲಿ ತುಂಬೆಯ ಪ್ರಕಾಶ್ ಶೆಟ್ಟಿ ಎಂಬ ಪ್ರಭಾವಿ ವ್ಯಕ್ತಿ ಸಬ್ ಕಾಂಟ್ರಾಕ್ಟ್ ಪಡೆದು ಇಲ್ಲಿ ತಾನು ಆಡಿದ್ದೇ ಆಟ ಎನ್ನುವಂತೆ ವರ್ತಿಸುತ್ತಿದ್ದಾರೆ. ವಾರದ ಹಿಂದೆ ಬಟ್ಟಂಪಾಡಿ ಬೀಚ್ ನಲ್ಲಿರುವ ಹೊಳೆಯಲ್ಲಿ ಪ್ರೀ ವೆಡ್ಡಿಂಗ್ ಶೂಟ್ ಗೆ ಬಂದಿದ್ದ ಜೋಡಿಯಿಂದ ಖಾಸಗಿ ವ್ಯಕ್ತಿಗಳು ಬೋಟಿಂಗ್ ನೆಪದಲ್ಲಿ ಯಾವುದೇ ರಸೀದಿ ನೀಡದೆ ಗೂಗಲ್ ಪೇ ಮುಖಾಂತರ 5000 ರೂಪಾಯಿಗಳನ್ನ ವಸೂಲಿ ಮಾಡಿದ್ದಾರೆ.


ಬಟ್ಟಂಪಾಡಿ ಹೊಳೆಯಲ್ಲಿ ಪ್ರವಾಸೋದ್ಯಮ ನೆಪದಲ್ಲಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಬೋಟಿಂಗ್ ದಂಧೆ ನಡೆಸುತ್ತಿದ್ದು ಇಲ್ಲಿನ ವಹಿವಾಟು ನೋಡಿಕೊಳ್ಳುತ್ತಿರುವ ಇಮ್ತಿಯಾಝ್ ಎಂಬಾತ ಪ್ರೀ ವೆಡ್ಡಿಂಗ್ ಶೂಟ್ ಬಂದಿದ್ದ ಜೋಡಿಯಿಂದ 5000 ರೂ. ವಸೂಲಿ ಮಾಡಿದ್ದಾರೆ ಎಂದು ದೂರು ಕೇಳಿಬಂದಿದೆ. ಈ ಬಗ್ಗೆ ನಗರದ ವೆಲೆನ್ಸಿಯಾ ನಿವಾಸಿ ಯುವತಿ ಉಚ್ಚಿಲದ ಮೀನುಗಾರ ಮುಖಂಡರಲ್ಲಿ ಅಲವತ್ತು ತೋಡಿಕೊಂಡಿದ್ದಾರೆ.
ಯುವತಿ ಇತ್ತೀಚೆಗೆ ತನ್ನ ಭಾವೀ ಪತಿ, ಸಂಬಂಧಿಗಳು, ಕ್ಯಾಮೆರಾಮೆನ್ ಜೊತೆ ಬಟ್ಟಂಪಾಡಿ ಹೊಳೆಯಲ್ಲಿ ಬೋಟಿಂಗ್ ನಡೆಸಿ ಪ್ರೀ ವೆಡ್ಡಿಂಗ್ ಶೂಟ್ ನಡೆಸುತ್ತಿದ್ದಾಗ ಅಲ್ಲಿದ್ದ ಇಮ್ತಿಯಾಝ್ ಎಂಬಾತ ವಿಚಾರಣೆ ನಡೆಸಿದ್ದಾನೆ. ಇದು ಪ್ರವಾಸೋದ್ಯಮ ಇಲಾಖೆಗೆ ಸೇರಿದ ಜಾಗ, ಇಲ್ಲಿ ಪ್ರವೇಶ ಮಾಡಬೇಕಿದ್ದಲ್ಲಿ ಹಣ ತೆರಬೇಕೆಂದು ಹೇಳಿ 100 ರೂಪಾಯಿ ಬೆಲೆಯ ಆರು ಟಿಕೆಟ್ ಗಳನ್ನ ನೀಡಿದ್ದ. ಆಬಳಿಕ ಶೂಟಿಂಗ್ ಮುಗಿದ ಬಳಿಕ, ಇಲ್ಲಿ ಬೋಟಿಂಗ್ ನಡೆಸಿದ್ದು ಅಪರಾಧ. ಅಧಿಕಾರಿಗಳಿಗೆ ಹೇಳಿ ದಂಡ ಹಾಕಿಸುತ್ತೇನೆಂದು ಬೆದರಿಸಿ ಮದುಮಗನಿಂದ ಗೂಗಲ್ ಪೇ ಮುಖಾಂತರ 5000 ರೂ.ಗಳನ್ನ ಪೀಕಿಸಿ ವಂಚಿಸಿದ್ದಾನೆ.

ಸ್ಥಳೀಯ ಮೀನುಗಾರ ಮುಖಂಡ ಸುಖೇಶ್ ಉಚ್ಚಿಲ್ ಈ ಬಗ್ಗೆ ದೂರು ನೀಡಲು ಮುಂದಾಗಿದ್ದಾರೆ. ಬಟ್ಟಂಪಾಡಿ ಬೀಚ್ ನಲ್ಲಿರುವ ಸ್ಥಳೀಯ ಮಹಿಳೆಯೊಬ್ಬರಿಗೆ ಸೇರಿದ ಖಾಸಗಿ ಜಮೀನನ್ನು ಅತಿಕ್ರಮಿಸಿ ಅಲ್ಲಿನ ಹೊಳೆಯಲ್ಲಿ ತುಂಬೆ ಪ್ರಕಾಶ್ ಶೆಟ್ಟಿಯ ಗೂಂಡಾಗಳು ಅಕ್ರಮ, ಅಸುರಕ್ಷಿತ ಬೋಟಿಂಗ್ ನಡೆಸುತ್ತಿದ್ದು ಇದಕ್ಕೆ ಸ್ಥಳೀಯ ಮೀನುಗಾರರು ವಿರೋಧ ವ್ಯಕ್ತ ಪಡಿಸುತ್ತಾ ಬಂದಿದ್ದಾರೆ. ಇತ್ತೀಚೆಗೆ ಹೊಳೆಯ ನಡುವೆ ಬೆಳೆದಿದ್ದ ಕಾಂಡ್ಲಾವನವನ್ನ ಕಡಿದು ಹಾಕಿದ್ದು ಆರೋಪಿ ಪ್ರಕಾಶ್ ಶೆಟ್ಟಿ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕರಣವನ್ನೂ ದಾಖಲಿಸಿದ್ದರು. ಆದರೆ ಮಂಗಳೂರಿನ ಜನಪ್ರತಿನಿಧಿಗಳ ಕೃಪೆಯಿಂದಾಗಿ ಪ್ರಕಾಶ್ ಶೆಟ್ಟಿ ವಿರುದ್ಧ ಯಾವುದೇ ಕ್ರಮ ಆಗಿಲ್ಲ ಎನ್ನುತ್ತಾರೆ ಸ್ಥಳೀಯರು. ಸ್ಥಳೀಯ ಮೀನುಗಾರರ ಒತ್ತಾಯಕ್ಕೆ ಮಣಿದು ಬಟ್ಟಂಪಾಡಿ ಬೀಚ್ ವ್ಯಾಪ್ತಿಯಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಅರಣ್ಯ ಇಲಾಖೆ ಸೂಚನಾ ಫಲಕ ಅಳವಡಿಸಿದೆ.
Ullal Money laundering in the name of tourism, unknown persons collect 5000 from couple for pre wedding shoot at Batapady Beach in uchila, Mangalore.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm