ಬ್ರೇಕಿಂಗ್ ನ್ಯೂಸ್
23-09-20 11:32 am Mangalore Correspondent ಕರಾವಳಿ
ಮಂಗಳೂರು, ಸೆ. 23: ತೀವ್ರ ಆಕ್ಷೇಪ, ವಿವಾದಕ್ಕೆ ಕಾರಣವಾಗಿದ್ದ ಲೈಟ್ಹೌಸ್ ರಸ್ತೆಗೆ ಇಂದು ಸರಕಾರದ ಆದೇಶದಂತೆ ‘ಮುಲ್ಕಿ ಸುಂದರ ರಾಮ ಶೆಟ್ಟಿ ರಸ್ತೆ’ ನಾಮಕರಣ ಮಾಡಲಾಯಿತು.
ಮೇಯರ್ ದಿವಾಕರ ಪಾಂಡೇಶ್ವರ ಅವರು ಕೆಥೊಲಿಕ್ ಕ್ಲಬ್ ಬಳಿ ಮುಲ್ಕಿ ಸುಂದರ ರಾಮ ಶೆಟ್ಟಿ ನಾಮಫಲಕವನ್ನು ಅನಾವರಣಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಇದೊಂದು ಹೆಮ್ಮೆಯ ಕಾರ್ಯಕ್ರಮ. ಮುಲ್ಕಿ ಸುಂದರ ರಾಮ ಶೆಟ್ಟಿಯವರ ಎಲ್ಲಾ ಅಭಿಮಾನಿಗಳು ಸಂಭ್ರಮ ಪಡುವ ದಿನ ಎಂದರು.
ಈ ಸಂದರ್ಭ ಉಪಸ್ಥಿತರಿದ್ದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಮಾತನಾಡಿ, ಇಲ್ಲೇ ಹುಟ್ಟಿ ಬೆಳೆದ ವಿಜಯ ಬ್ಯಾಂಕನ್ನು ಉಳಿಸಿಕೊಳ್ಳಲಾಗದಿದ್ದರೂ, ಮುಲ್ಕಿ ಸುಂದರ ರಾಮ ಶೆಟ್ಟಿ ಅವರ ಹೆಸರನ್ನು ನೆನಪಿಸುವ ಕಾರ್ಯವನ್ನು ಮಾಡಲಾಗಿದೆ ಎಂದರು.


ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಗೌರವಾಧ್ಯಕ್ಷ ಸದಾನಂದ ಶೆಟ್ಟಿ, ಕಾರ್ಯಕಾರಿ ಅಧ್ಯಕ್ಷ ಎ.ಬಿ. ಶೆಟ್ಟಿ ಮಾತನಾಡಿ ಸಂತಸ ವ್ಯಕ್ತಪಡಿಸಿದರು. ಉಪ ಮೇಯರ್ ವೇದಾವತಿ, ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಮುಲ್ಕಿ ಸುಂದರ ರಾಮ ಶೆಟ್ಟಿ ಅಭಿಮಾನಿ ಬಳಗದ ಕಾರ್ಯದರ್ಶಿ ಮುಲ್ಕಿ ಕರುಣಾಕರ ಶೆಟ್ಟಿ, ಅಜಿತ್ ಕುಮಾರ್ ಮಾಲಾಡಿ, ಮಾಜಿ ಮೇಯರ್ ಮಹಾಬಲ ಮಾರ್ಲ ಮೊದಲಾದವರು ಉಪಸ್ಥಿತರಿದ್ದರು.
ನಾಮಫಲಕ ಅನಾವರಣದ ಬಳಿಕ ಸೇರಿದ್ದವರು ಚೆಂಡೆ, ಮದ್ದಳೆಯೊಂದಿಗೆ ಲೈಟ್ಹೌಸ್ನಿಂದ ಅಂಬೇಡ್ಕರ್ ವೃತ್ತದವರೆಗೆ ಮೆರವಣಿಗೆ ನಡೆಸಿದರು.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
08-05-26 06:45 pm
HK News Staffer
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
ಬಂಗಾಳದಲ್ಲಿ ಟಿಎಂಸಿ ಯುಗಾಂತ್ಯ ; ಮಮತಾ ಸರ್ಕಾರ ವಜಾಗ...
07-05-26 10:29 pm
08-05-26 10:33 pm
HK News Staffer
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
ಸವಣೂರು ಬಳಿ ಭೀಕರ ಅಪಘಾತ ; ಟ್ಯಾಂಕರ್ ಡಿಕ್ಕಿಯಾಗಿ ಬ...
05-05-26 11:01 pm
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
08-05-26 07:02 pm
HK News Staffer
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm
ಬಂಗಾಳದಲ್ಲಿ ಬಿಜೆಪಿ ಭರ್ಜರಿ ಗೆಲುವಿನ ಬೆನ್ನಲ್ಲೇ ಸು...
07-05-26 12:17 pm