ಬ್ರೇಕಿಂಗ್ ನ್ಯೂಸ್
06-04-22 06:06 pm Mangalore Correspondent ಕರಾವಳಿ
ಪುತ್ತೂರು, ಎ.6: ಉಪ್ಪಿನಂಗಡಿ ಬಳಿಯ ಗುಂಡ್ಯದಲ್ಲಿ ಅನೈತಿಕ ಪೊಲೀಸ್ ಪ್ರಕರಣದಲ್ಲಿ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ ಘಟನೆ ಸಂಬಂಧಿಸಿ ಹಿಂದು ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕರನ್ನು ರಾತ್ರೋರಾತ್ರಿ ಅರ್ಧ ದಾರಿಯಲ್ಲಿ ಬಸ್ಸಿನಿಂದ ಇಳಿಸಿ ತರಾಟೆಗೆತ್ತಿಕೊಂಡ ಘಟನೆ ನಡೆದಿದ್ದು , ಶಾಸಕರ ವಿರುದ್ಧ ಘೆರಾವ್ ಹಾಕಿದ್ದಾರೆ.
ಎ.5ರ ಮಂಗಳವಾರ ಮಧ್ಯಾಹ್ನ ನಜೀರ್ ಎಂಬ ಪುತ್ತೂರಿನ ಯುವಕನೊಬ್ಬ ಹಿಂದು ಯುವತಿಯನ್ನು ಆಟೋದಲ್ಲಿ ಕರೆದೊಯ್ಯುತ್ತಿದ್ದಾಗ ಗುಂಡ್ಯದಲ್ಲಿ ಹಿಂದು ಸಂಘಟನೆಗಳ ಯುವಕರು ಅಡ್ಡ ಹಾಕಿದ್ದರು. ಆನಂತರ, ಯುವಕ ನಜೀರ್ ಮೇಲೆ ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಹಲ್ಲೆಗೊಳಗಾದ ನಜೀರ್ ಉಪ್ಪಿನಂಗಡಿ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು. ಪೊಲೀಸರು ಸಂಜೆ ಹೊತ್ತಿಗೆ ಹಿಂದು ಸಂಘಟನೆಗೆ ಸೇರಿದ ಐವರು ಯುವಕರನ್ನು ಬಂಧಿಸಿದ್ದರು. ಸುರೇಂದ್ರ, ತೀರ್ಥಪ್ರಸಾದ್, ಜಿತೇಶ್, ಬಾಲಚಂದ್ರ, ರಂಜಿತ್ ಬಂಧಿತರಾಗಿದ್ದರು.

ಪೊಲೀಸರು ಬಂಧನ ಕಾರ್ಯಾಚರಣೆ ಬೆನ್ನಲ್ಲೇ ಅಲ್ಲಿನ ಸಂಘಟನೆಯ ಕಾರ್ಯಕರ್ತರು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಫೋನ್ ಮಾಡಿದ್ದರು. ಮಠಂದೂರು ಪುತ್ತೂರಿನಲ್ಲಿಯೇ ಇದ್ದರೂ, ತಾನು ಊರಲ್ಲಿ ಇಲ್ಲ. ಆಮೇಲೆ ನೋಡುತ್ತೇನೆ ಎಂದು ನುಣುಚಿಕೊಂಡಿದ್ದರು ಎನ್ನಲಾಗಿದೆ. ಆದರೆ, ಶಾಸಕರು ಊರಲ್ಲೇ ಇರುವ ಬಗ್ಗೆ ಮಾಹಿತಿ ಹೊಂದಿದ್ದ ಸಂಘಟನೆಯ ಕಾರ್ಯಕರ್ತರು ಮಠಂದೂರು ಎಲ್ಲಿ ಹೋಗುತ್ತಾರೆ ಅನ್ನುವುದರ ಬಗ್ಗೆ ನಿಗಾ ಇಟ್ಟಿದ್ದರು. ರಾತ್ರಿ ವೇಳೆ ಶಾಸಕ ಮಠಂದೂರು ಪುತ್ತೂರಿನಿಂದ ಬೆಂಗಳೂರಿಗೆ ತೆರಳಲು ಕೆಎಸ್ಸಾರ್ಟಿಸಿ ವೋಲ್ವೋ ಬಸ್ ಹತ್ತಿದ್ದರು.

ಈ ಬಗ್ಗೆ ಮಾಹಿತಿ ಪಡೆದಿದ್ದ ಹಿಂದು ಸಂಘಟನೆ ಕಾರ್ಯಕರ್ತರು ಉಪ್ಪಿನಂಗಡಿ ಹೆದ್ದಾರಿಯಲ್ಲಿ ಬಸ್ಸನ್ನು ಅಡ್ಡಗಟ್ಟಿದ್ದು, ಶಾಸಕ ಸಂಜೀವ ಮಠಂದೂರು ಅವರಿಗೆ ಘೆರಾವ್ ಹಾಕಿದ್ದಾರೆ. ಅಲ್ಲದೆ, ಶಾಸಕರನ್ನು ಬಸ್ಸಿನಿಂದ ಕೆಳಕ್ಕಿಳಿಸಿ ಸುಳ್ಳು ಹೇಳಿದ್ದಕ್ಕೆ ತರಾಟೆಗೆ ಎತ್ತಿಕೊಂಡಿದ್ದಾರೆ. ನಮ್ಮ ಯುವಕರು ಹಿಂದುತ್ವದ ರಕ್ಷಣೆಗಾಗಿ ಕೆಲಸ ಮಾಡಿದ್ದಾರೆ. ಅವರನ್ನು ರಕ್ಷಣೆ ಮಾಡಲಾಗದ ನೀವು ತಾನು ಊರಲ್ಲೇ ಇಲ್ಲ ಎಂದು ಸುಳ್ಳು ಹೇಳಿದ್ದೀರಲ್ಲಾ ಎಂದು ಬೈದಿದ್ದಾರೆ.
Moral Policing in Gundya, VHP members gherao MLA travelling in KSRTC Bus in Mangalore.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm