ಬ್ರೇಕಿಂಗ್ ನ್ಯೂಸ್
23-09-20 03:51 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 23: ಮುಲ್ಕಿ ಸುಂದರರಾಮ ಶೆಟ್ಟಿ ಹೆಸರು ರಸ್ತೆ ನಾಮಕರಣದ ವಿವಾದ ಮುಗಿಯುತ್ತಲೇ ಒಂದು ವಿಭಾಗದವರು ನಾರಾಯಣ ಗುರು ಹೆಸರನ್ನು ಮಂಗಳೂರಿನ ವೃತ್ತವೊಂದಕ್ಕೆ ಇಡಬೇಕೆಂದು ಒತ್ತಾಯ ಆರಂಭಿಸಿದ್ದಾರೆ. ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ಹೆಸರು ಇಡಬೇಕೆಂದು ಬಿರುವೆರ್ ಕುಡ್ಲ ಸಂಘಟನೆಯಿಂದ ಮಹಾನಗರ ಪಾಲಿಕೆಗೆ ಮನವಿಯನ್ನೂ ನೀಡಲಾಗಿದೆ. ಈ ವಿಚಾರ ಪ್ರಸ್ತಾಪ ಆಗುತ್ತಲೇ ಲೇಡಿಹಿಲ್ ವೃತ್ತದ ಬಳಿ ಇರುವ ಶಾಲಾಡಳಿತ ಮಂಡಳಿಗಳು ವಿರೋಧ ಸೂಚಿಸಿದ್ದು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.
ಈ ನಡುವೆ, ಕೆಲವರು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಖಾಸಗಿ ಬಸ್ ಗಳ ಮುಂದೆ ನಾರಾಯಣ ಗುರು ಸರ್ಕಲ್ ಎಂದು ಸ್ಟಿಕ್ಕರ್ ಅಂಟಿಸಿದ್ದಾರೆ. ಲೇಡಿಹಿಲ್ ದಾರಿಯಾಗಿ ಸಾಗುವ ಬಸ್ ಗಳ ಮುಂಭಾಗದಲ್ಲಿ ಈ ಸ್ಟಿಕ್ಕರ್ ಕಾಣಿಸಿಕೊಂಡಿದೆ. ಬಿರುವೆರ್ ಕುಡ್ಲ ಸಂಘಟನೆಯ ವತಿಯಿಂದ ಹೀಗೊಂದು ಅಭಿಯಾನ ನಡೀತಿದ್ಯಾ ಅನುಮಾನ ಕೇಳಿಬಂದಿದೆ. ಆದರೆ ಬಸ್ಸಿನ ಮುಂದೆ ಸ್ಟಿಕ್ಕರ್ ಅಂಟಿಸಿದ ಮಾತ್ರಕ್ಕೆ ಅಲ್ಲಿನ ಹೆಸರು ಬದಲಾವಣೆ ಆಗಲ್ಲ..! ಅಂಥ ಒತ್ತಾಯಕ್ಕೆ ಮತ್ತೊಂದಷ್ಟು ಒತ್ತಡ ಬೀಳುವುದಂತೂ ಖಚಿತ.

ಹೀಗೊಂದು ವಿವಾದ ಎದ್ದಿರುವ ಬಗ್ಗೆ ಬಿಲ್ಲವ ಸಂಘಗಳ ಅಭಿಪ್ರಾಯ ಕೇಳಿದರೆ ನಾವೇನು ಅಂತಹ ಒತ್ತಾಯ ಮಾಡಿಲ್ಲ ಎನ್ನುತ್ತಾರೆ. ನಾರಾಯಣ ಗುರು ಶಾಂತಿಪ್ರಿಯರು. ಎಲ್ಲರೂ ಒಂದೇ ಎಂದು ಸಾರಿದವರು. ಅಂಥ ವ್ಯಕ್ತಿಯ ಹೆಸರಲ್ಲಿ ವಿವಾದ ಎಬ್ಬಿಸಬಾರದು. ಈ ವಿವಾದಗಳ ಹಿಂದೆ ರಾಜಕೀಯ ಇದೆ. ಗುರುಗಳ ಹೆಸರಿಡುವ ವಿಚಾರವನ್ನು ಶಾಂತಿಯುತವಾಗೇ ಮುಗಿಸಬೇಕು. ಗುರುಗಳ ಹೆಸರಿಡುವುದಿದ್ದರೆ ಲೇಡಿಹಿಲ್ ವೃತ್ತವೇ ಆಗಬೇಕಂತಿಲ್ಲ. ಹೆಸರು ಇಲ್ಲದ ವೃತ್ತಗಳಿಗೆ ಇಟ್ಟು ಸೌಹಾರ್ದದಿಂದ ಕೆಲಸ ಮುಗಿಸಬಹುದು. ಹಂಪನಕಟ್ಟೆಯ ವೃತ್ತಕ್ಕೆ ಯಾವುದೇ ಹೆಸರಿಲ್ಲ. ಮಂಗಳೂರಿನಲ್ಲಿ ಪ್ರಮುಖ ವೃತ್ತವೂ ಹೌದು.. ಹಾಗೆ ನೋಡಿದರೆ ಹಂಪನಕಟ್ಟೆ ಸಿಗ್ನಲ್ ವೃತ್ತಕ್ಕೆ ನಾರಾಯಣ ಗುರುಗಳ ಹೆಸರು ಇಡಬಹುದು ಎಂದು ಬಿಲ್ಲವ ಸಂಘಟನೆಯ ಪ್ರಮುಖರೊಬ್ವರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm