ಬ್ರೇಕಿಂಗ್ ನ್ಯೂಸ್
23-09-20 03:51 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 23: ಮುಲ್ಕಿ ಸುಂದರರಾಮ ಶೆಟ್ಟಿ ಹೆಸರು ರಸ್ತೆ ನಾಮಕರಣದ ವಿವಾದ ಮುಗಿಯುತ್ತಲೇ ಒಂದು ವಿಭಾಗದವರು ನಾರಾಯಣ ಗುರು ಹೆಸರನ್ನು ಮಂಗಳೂರಿನ ವೃತ್ತವೊಂದಕ್ಕೆ ಇಡಬೇಕೆಂದು ಒತ್ತಾಯ ಆರಂಭಿಸಿದ್ದಾರೆ. ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ಹೆಸರು ಇಡಬೇಕೆಂದು ಬಿರುವೆರ್ ಕುಡ್ಲ ಸಂಘಟನೆಯಿಂದ ಮಹಾನಗರ ಪಾಲಿಕೆಗೆ ಮನವಿಯನ್ನೂ ನೀಡಲಾಗಿದೆ. ಈ ವಿಚಾರ ಪ್ರಸ್ತಾಪ ಆಗುತ್ತಲೇ ಲೇಡಿಹಿಲ್ ವೃತ್ತದ ಬಳಿ ಇರುವ ಶಾಲಾಡಳಿತ ಮಂಡಳಿಗಳು ವಿರೋಧ ಸೂಚಿಸಿದ್ದು ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದು ಹೊಸ ವಿವಾದಕ್ಕೆ ಕಾರಣವಾಗಿದೆ.
ಈ ನಡುವೆ, ಕೆಲವರು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಖಾಸಗಿ ಬಸ್ ಗಳ ಮುಂದೆ ನಾರಾಯಣ ಗುರು ಸರ್ಕಲ್ ಎಂದು ಸ್ಟಿಕ್ಕರ್ ಅಂಟಿಸಿದ್ದಾರೆ. ಲೇಡಿಹಿಲ್ ದಾರಿಯಾಗಿ ಸಾಗುವ ಬಸ್ ಗಳ ಮುಂಭಾಗದಲ್ಲಿ ಈ ಸ್ಟಿಕ್ಕರ್ ಕಾಣಿಸಿಕೊಂಡಿದೆ. ಬಿರುವೆರ್ ಕುಡ್ಲ ಸಂಘಟನೆಯ ವತಿಯಿಂದ ಹೀಗೊಂದು ಅಭಿಯಾನ ನಡೀತಿದ್ಯಾ ಅನುಮಾನ ಕೇಳಿಬಂದಿದೆ. ಆದರೆ ಬಸ್ಸಿನ ಮುಂದೆ ಸ್ಟಿಕ್ಕರ್ ಅಂಟಿಸಿದ ಮಾತ್ರಕ್ಕೆ ಅಲ್ಲಿನ ಹೆಸರು ಬದಲಾವಣೆ ಆಗಲ್ಲ..! ಅಂಥ ಒತ್ತಾಯಕ್ಕೆ ಮತ್ತೊಂದಷ್ಟು ಒತ್ತಡ ಬೀಳುವುದಂತೂ ಖಚಿತ.

ಹೀಗೊಂದು ವಿವಾದ ಎದ್ದಿರುವ ಬಗ್ಗೆ ಬಿಲ್ಲವ ಸಂಘಗಳ ಅಭಿಪ್ರಾಯ ಕೇಳಿದರೆ ನಾವೇನು ಅಂತಹ ಒತ್ತಾಯ ಮಾಡಿಲ್ಲ ಎನ್ನುತ್ತಾರೆ. ನಾರಾಯಣ ಗುರು ಶಾಂತಿಪ್ರಿಯರು. ಎಲ್ಲರೂ ಒಂದೇ ಎಂದು ಸಾರಿದವರು. ಅಂಥ ವ್ಯಕ್ತಿಯ ಹೆಸರಲ್ಲಿ ವಿವಾದ ಎಬ್ಬಿಸಬಾರದು. ಈ ವಿವಾದಗಳ ಹಿಂದೆ ರಾಜಕೀಯ ಇದೆ. ಗುರುಗಳ ಹೆಸರಿಡುವ ವಿಚಾರವನ್ನು ಶಾಂತಿಯುತವಾಗೇ ಮುಗಿಸಬೇಕು. ಗುರುಗಳ ಹೆಸರಿಡುವುದಿದ್ದರೆ ಲೇಡಿಹಿಲ್ ವೃತ್ತವೇ ಆಗಬೇಕಂತಿಲ್ಲ. ಹೆಸರು ಇಲ್ಲದ ವೃತ್ತಗಳಿಗೆ ಇಟ್ಟು ಸೌಹಾರ್ದದಿಂದ ಕೆಲಸ ಮುಗಿಸಬಹುದು. ಹಂಪನಕಟ್ಟೆಯ ವೃತ್ತಕ್ಕೆ ಯಾವುದೇ ಹೆಸರಿಲ್ಲ. ಮಂಗಳೂರಿನಲ್ಲಿ ಪ್ರಮುಖ ವೃತ್ತವೂ ಹೌದು.. ಹಾಗೆ ನೋಡಿದರೆ ಹಂಪನಕಟ್ಟೆ ಸಿಗ್ನಲ್ ವೃತ್ತಕ್ಕೆ ನಾರಾಯಣ ಗುರುಗಳ ಹೆಸರು ಇಡಬಹುದು ಎಂದು ಬಿಲ್ಲವ ಸಂಘಟನೆಯ ಪ್ರಮುಖರೊಬ್ವರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am