ಬ್ರೇಕಿಂಗ್ ನ್ಯೂಸ್
09-04-22 03:31 pm Mangalore Correspondent ಕರಾವಳಿ
ಪುತ್ತೂರು, ಎ.9 : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಎಪ್ರಿಲ್ 10 ರಿಂದ 20ರ ತನಕ ನಡೆಯಲಿದ್ದು, ಈ ಬಾರಿ ಅನ್ಯಧರ್ಮೀಯರಿಗೆ ಉತ್ಸವ ಸಂದರ್ಭದಲ್ಲಿ ವ್ಯಾಪಾರಕ್ಕೆ ನಿಷೇಧ ಹೇರುವ ಜೊತೆಗೆ ಆಟೋ ರಿಕ್ಷಾ ಸೇರಿ ಟ್ಯಾಕ್ಸಿ ವಾಹನಗಳಿಗೂ ನಿರ್ಬಂಧ ಹೇರಲು ಹಿಂದು ಸಂಘಟನೆಗಳು ಸಿದ್ಧತೆ ನಡೆಸಿವೆ.
ಪುತ್ತೂರು ಜಾತ್ರೆ ಸಂದರ್ಭದಲ್ಲಿ ಭಕ್ತರು ಮುಸ್ಲಿಮರ ಆಟೋ, ಕ್ಯಾಬ್ಗಳನ್ನು ಬಳಕೆ ಮಾಡದಂತಾಗಲು ಹಿಂದುಗಳ ಆಟೋ ಇನ್ನಿತರ ವಾಹನಗಳಿಗೆ ಕೇಸರಿ ಧ್ವಜ ನೀಡುವ ಅಭಿಯಾನಕ್ಕೆ ಹಿಂದು ಜಾಗರಣ ವೇದಿಕೆ ಮುಂದಾಗಿದೆ. ಪುತ್ತೂರಿನ ಆಟೋ ಚಾಲಕರಿಗೆ ಭಗವಧ್ವಾಜವನ್ನು ವಿತರಣೆ ಮಾಡಲಾಗುತ್ತಿದ್ದು ಹಿಂದುಗಳು ಮುಸ್ಲಿಮರ ವಾಹನಗಳನ್ನು ಕಾರ್ಯಕರ್ತರು ಬಳಸದಂತೆ ಕರೆ ನೀಡುತ್ತಿದ್ದಾರೆ.


ಜಾತ್ರೆಯ ಸಂದರ್ಭದಲ್ಲಿ ಅನ್ಯಧರ್ಮೀಯ ಯುವಕರು ಹಿಂದು ಹೆಣ್ಣು ಮಕ್ಕಳನ್ನು ಮೋಸದ ಜಾಲದಲ್ಲಿ ಸಿಲುಕಿಸುವ ಕೆಲಸ ಮಾಡುತ್ತಾರೆ ಎಂದು ಆರೋಪಿಸಿರುವ ಹಿಂದೂ ಜಾಗರಣ ವೇದಿಕೆಯ ನಾಯಕರು, ಭಗವಾಧ್ವಜ ಇರುವ ಆಟೋಗಳಲ್ಲಿ ಮಾತ್ರವೇ ಭಕ್ತಾದಿಗಳು ಜಾತ್ರೆಗೆ ಆಗಮಿಸಬೇಕು. ಅದಕ್ಕಾಗಿ ಹಿಂದುಗಳ ಆಟೋಗಳಿಗೆ ಕೇಸರಿ ಧ್ವಜ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೆ, ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರಕಾರದಿಂದ ಹಿಂದೂಗಳಿಗೆ ಯಾವುದೇ ಸಹಾಯ ದೊರೆಯುತ್ತಿಲ್ಲ. ಹಿಂದೂ ಕಾರ್ಯಕರ್ತರ ಮೇಲೆ ಕೇಸು ದಾಖಲಿಸಲಾಗುತ್ತಿದ್ದು , ಅದಕ್ಕಾಗಿ ಹಿಂದು ಸಮಾಜವೇ ಸ್ವತಃ ಕಾರ್ಯಾಚರಣೆಗೆ ಇಳಿದಿದೆ ಎನ್ನುವ ವಾದವನ್ನು ಹಿಂಜಾವೇ ಮುಖಂಡರು ಮುಂದಿಟ್ಟಿದ್ದಾರೆ. ಹಿಂಜಾವೇ ಕಾರ್ಯಕರ್ತರ ಹೊಸ ನಡೆ ಚರ್ಚೆಗೆ ಕಾರಣವಾಗಿದ್ದು, ಧರ್ಮ ಸಂಘರ್ಷಕ್ಕೆ ಮತ್ತೊಂದು ಕಾರಣ ಸಿಕ್ಕಂತಾಗಿದೆ.


ಇತ್ತೀಚೆಗೆ ಪುತ್ತೂರು ಜಾತ್ರೆ ಸಂದರ್ಭದಲ್ಲಿ ಅನ್ಯಧರ್ಮೀಯರಿಗೆ ಅವಕಾಶ ಇಲ್ಲವೆಂದು ದೇವಸ್ಥಾನದ ಆಡಳಿತ ಮಂಡಳಿಯೇ ನಿರ್ಧಾರ ಮಾಡಿದ್ದಲ್ಲದೆ, ವ್ಯಾಪಾರಸ್ಥರ ಏಲಂ ಪ್ರಕಟಣೆಯಲ್ಲಿ ಬಹಿರಂಗವಾಗಿಯೇ ಹೇಳಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಆಡಳಿತ ಮಂಡಳಿ ಸದಸ್ಯರು, 2013 ರಿಂದಲೇ ಇದೇ ನೀತಿ ಅನುಸರಿಸಲಾಗುತ್ತಿದೆ ಎಂದು ಹೇಳಿದ್ದರು.
Amid Hindu Muslim row in Karnataka a new controversy has erupted in Mangalore Dakshina Kannada at Puttur Shree Mahalingeshwara Temple annual feast where Muslim vehicles like auto cars two wheelers are not allowed inside the temple premises.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
30-03-26 10:31 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
30-03-26 11:13 pm
Mangalore Correspondent
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟಿಸಿದ್ದೇನೆ, ನಾನು...
29-03-26 11:11 am
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
30-03-26 07:35 pm
HK News Desk
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm