ಬ್ರೇಕಿಂಗ್ ನ್ಯೂಸ್
12-04-22 01:28 pm Udupi Correspondent ಕರಾವಳಿ
ಉಡುಪಿ, ಎ.12: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ನಲ್ವತ್ತು ಶೇಕಡಾ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಉಡುಪಿಯ ಶಾಂಭವಿ ಲಾಡ್ಜಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉಡುಪಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಹೋಟೆಲಿನ ಲಾಡ್ಜಿನಲ್ಲಿ ರೂಮ್ ನಂಬರ್ 207 ರಲ್ಲಿ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಗೆಳೆಯರು ಪಕ್ಕದ ಕೊಠಡಿಯಲ್ಲಿ ಪತ್ತೆಯಾಗಿದ್ದು ಅವರಿಗೆ ಯಾವುದೇ ಮಾಹಿತಿ ಇರಲಿಲ್ಲ. ಎಸ್ಪಿ ವಿಷ್ಣುವರ್ಧನ್ ಸ್ಥಳಕ್ಕೆ ಆಗಮಿಸಿದ್ದು ಕೆಎಂಸಿ ಮಣಿಪಾಲದ ಫೋರೆನ್ಸಿಕ್ ತಜ್ಞರನ್ನು ಕರೆಸಿ ತನಿಖೆ ಕೈಗೊಂಡಿದ್ದಾರೆ.
ಆತ್ಮಹತ್ಯೆಗೂ ಮುನ್ನ ಸಂತೋಷ್ ಪಾಟೀಲ್ ಮಾಧ್ಯಮದ ವ್ಯಕ್ತಿಗಳಿಗೆ ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ಬರೆದು ವಾಟ್ಸಪ್ ಸಂದೇಶ ಕಳುಹಿಸಿದ್ದರು. ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ವಾಟ್ಸಪ್ ಮೆಸೇಜ್ ಹಾಕಿದ್ದು ಆಬಳಿಕ ಫೋನ್ ಸ್ವಿಚ್ ಆಫ್ ಆಗಿತ್ತು. ನಿನ್ನೆ ರಾತ್ರಿಯೇ ಮೆಸೇಜ್ ಬಂದಿದ್ದು ಆನಂತರ ಪೊಲೀಸರು ಹುಡುಕಾಟ ನಡೆಸಿದ್ದರು. ಮೊಬೈಲ್ ಟವರ್ ಲೊಕೇಶನ್ ಉಡುಪಿಯಲ್ಲಿ ತೋರಿಸುತ್ತಿತ್ತು.
ನನ್ನ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪ ನೇರ ಕಾರಣ ಎಂದು ಮೆಸೇಜ್ ನಲ್ಲಿ ಉಲ್ಲೇಖಿಸಿದ್ದಾರೆ. ಸಚಿವರ ವಿರುದ್ಧ ತನಿಖೆ ನಡೆಸಿ ಶಿಕ್ಷೆಯಾಗಬೇಕು, ನನ್ನೆಲ್ಲಾ ಆಸೆ ಬದಿಗೊತ್ತಿ ಆತ್ಮಹತ್ಯೆ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ, ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು , ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕೆಂದು ಮೆಸೇಜ್ ನಲ್ಲಿ ಮನವಿ ಮಾಡಿದ್ದಾರೆ.
A man killed himself in a lodge in the city after writing a suicide note in which he has named Rural Development & Panchayat Raj (RDPR) minister K S Eshwarappa responsible for his extreme step. The deceased has been identified as Santhosh K Patil, who was a building contractor by profession, killed himself in room no 207 of Shambhavi Lodge near KSRTC bus stand. It is learnt that he consumed poison. Two of his friends were found in an adjoining room of the same lodge.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am