ಬ್ರೇಕಿಂಗ್ ನ್ಯೂಸ್
12-04-22 02:48 pm Mangalore Correspondent ಕರಾವಳಿ
ಮಂಗಳೂರು, ಎ.12: ಸಚಿವ ಈಶ್ವರಪ್ಪ ವಿರುದ್ಧ ಆರೋಪಿಸಿ ಸಾವಿಗೆ ಶರಣಾಗಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಸಂಪೂರ್ಣ ತನಿಖೆ ನಡೆಸಲಿದ್ದಾರೆ. ಮಂಗಳೂರಿನಿಂದ ವಿಧಿ ವಿಜ್ಞಾನ ಇಲಾಖೆಯ ತಜ್ಞರನ್ನು ಕಳಿಸಲು ಪೊಲೀಸರಿಗೆ ಸೂಚಿಸಿದ್ದೇನೆ. ಪ್ರಾಥಮಿಕ ತನಿಖೆಯ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಆ ಬಗ್ಗೆ ಪ್ರಾಥಮಿಕ ಮಾಹಿತಿಯನ್ನಷ್ಟೇ ಪಡೆದಿದ್ದೇನೆ. ಪೊಲೀಸರ ತನಿಖೆಯಲ್ಲಿ ನಾವು ಯಾವುದೇ ಒತ್ತಡ ಹೇರುವುದಿಲ್ಲ. ಪೊಲೀಸರು ಸ್ವತಂತ್ರವಾಗಿ ತನಿಖೆ ನಡೆಸಲಿದ್ದಾರೆ. ಸಂತೋಷ್ ಪಾಟೀಲ್ ಎನ್ನುವ ವ್ಯಕ್ತಿ ಯಾತಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸಲಿದ್ದಾರೆ. ಆತ ಮಾಡಿದ್ದ ಆರೋಪದ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಈಶ್ವರಪ್ಪ ಸಾವಿಗೆ ಕಾರಣ ಎಂದು ನೇರ ಆರೋಪ ಮಾಡಲಾಗಿದೆ. ಇದಕ್ಕಾಗಿ ಈಶ್ವರಪ್ಪ ರಾಜಿನಾಮೆ ಕೇಳುತ್ತೀರಾ.. ಪ್ರತಿಪಕ್ಷದವರು ಮುಖ್ಯಮಂತ್ರಿ ರಾಜಿನಾಮೆಯನ್ನೂ ಕೇಳುತ್ತಿದ್ದಾರೆ ಎಂಬ ಪ್ರಶ್ನೆಗೆ ಈ ಹಿಂದೆ ಸಿದ್ದರಾಮಯ್ಯ ಸರಕಾರ ಇದ್ದಾಗ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ದರಾಮಯ್ಯ ರಾಜಿನಾಮೆ ನೀಡಿದ್ದರಾ ಎಂದು ಪ್ರಶ್ನೆ ಮಾಡಿದರು. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎಂದು ಕೇಳಿದ್ದಕ್ಕೆ, ಪ್ರಾಥಮಿಕ ತನಿಖೆ ಆಗಲಿ ಎಂದಷ್ಟೇ ಹೇಳಿದರು.

ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದನ್ನು ನೀವು ತನಿಖೆ ಮಾಡಿದ್ದೀರಾ ಎಂಬ ಪ್ರಶ್ನೆಗೆ, ಗುತ್ತಿಗೆದಾರರು ಆರೋಪ ಮಾತ್ರ ಮಾಡಿದ್ದರು. ಆ ಕುರಿತು ಯಾವುದೇ ದಾಖಲೆಯನ್ನು ಸರಕಾರಕ್ಕಾಗಲೀ, ಯಾವುದೇ ತನಿಖಾ ತಂಡಕ್ಕೂ ಸಲ್ಲಿಸಿಲ್ಲ ಎಂದು ಹೇಳಿ ನುಣುಚಿಕೊಂಡರು.
The police are conducting a full investigation into the suicide of contractor Santosh Patil, who is accused of murdering minister Eshwarappa. I have instructed the police to send a specialist in the field of science from Mangalore. Chief Minister Basavaraja Bommai said the next decision will be taken after the preliminary inquiry.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm