ಬ್ರೇಕಿಂಗ್ ನ್ಯೂಸ್
13-04-22 05:20 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಚರ್ಚ್ ತೆರಳಿ ಮನೆಗೆ ವಾಪಾಸಾಗಿದ್ದ ಬಾಲಕ ಧಿಡೀರ್ ನಾಪತ್ತೆಯಾದ ಘಟನೆ ಉಳ್ಳಾಲ ಬೈಲಿನ ಗಣೇಶನಗರದಲ್ಲಿ ನಡೆದಿದೆ. ಬಾಲಕ ಅಪಹರಣಕ್ಕೀಡಾದ ಶಂಕೆ ವ್ಯಕ್ತವಾಗಿದ್ದು ಉಳ್ಳಾಲ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಉಳ್ಳಾಲ ಬೈಲು, ಗಣೇಶ ನಗರದ ಬಾಡಿಗೆ ಮನೆ ನಿವಾಸಿಗಳಾದ ಜಿತನ್ ರೆಸ್ಕಿನ್ಹಾ - ರೋಹಿತ ಬ್ರಾಕ್ಸ್ ದಂಪತಿಯ ಪ್ರಥಮ ಪುತ್ರ ರಿಯಾನ್ (9) ನಾಪತ್ತೆಯಾದ ಬಾಲಕ. ರಿಯಾನ್ ತೊಕ್ಕೊಟ್ಟು ಸಂತ ಸೆಬಾಸ್ಟಿಯನ್ ಶಾಲೆಯಲ್ಲಿ ಮೂರನೇ ತರಗತಿ ಮುಗಿಸಿದ್ದ. ರಿಯಾನ್ ಇಂದು ಬೆಳಗ್ಗೆ ಸ್ನೇಹಿತರೊಂದಿಗೆ ತೊಕ್ಕೊಟ್ಟು ಚರ್ಚ್ ತೆರಳಿದ್ದು ಮಧ್ಯಾಹ್ನ 1.35 ಗಂಟೆಗೆ ವಾಪಾಸಾಗಿದ್ದ. ಚರ್ಚಿನಿಂದ ವಾಪಸಾದ ರಿಯಾನ್ ಗಣೇಶ್ ನಗರದ ತನ್ನ ದೊಡ್ಡಮ್ಮನ ಮನೆಗೆ ತೆರಳಿದ್ದು ಅಲ್ಲಿದ್ದ ತಾಯಿ ತಮ್ಮ ಬಾಡಿಗೆ ಮನೆಯ ಕೀಲಿ ಕೈಯನ್ನ ರಿಯಾನಲ್ಲಿ ನೀಡಿ ಮನೆಗೆ ಹೋಗಲು ಹೇಳಿದ್ದಾರೆ. ರಿಯಾನ್ ತಾಯಿ ರೋಹಿತ ಅವರು 2 ಗಂಟೆ ಸುಮಾರಿಗೆ ಮನೆಗೆ ತೆರಳಿದಾಗ ಕಿಟಕಿಯಲ್ಲಿ ಮನೆಯ ಕೀಲಿ ಕೈ ಇದ್ದು ರಿಯಾನ್ ನಾಪತ್ತೆಯಾಗಿದ್ದಾನೆ. ಗಲಿ ಬಿಲಿಗೊಂಡ ರಿಯಾನ್ ಕುಟುಂಬಸ್ಥರು ಮತ್ತು ಸ್ಥಳೀಯರು ಬಾಲಕನಿಗಾಗಿ ಶೋಧ ನಡೆಸಿದ್ದಾರೆ.






ರಿಯಾನ್ 1.30 ಗಂಟೆಗೆ ಚರ್ಚಿಂದ ವಾಪಸಾದದ್ದನ್ನ ಸ್ಥಳೀಯರು ಗಮನಿಸಿದ್ದಾರೆ. ಘಟನೆಯ ಬಗ್ಗೆ ರಿಯಾನ್ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಸ್ಥಳೀಯ ಮನೆಯೊಂದರ ಸಿಸಿಟಿವಿ ಪೂಟೇಜನ್ನ ಪರಿಶೀಲನೆ ನಡೆಸುತ್ತಿದ್ದಾರೆ.ರಿಯಾನ್ ಗೆ ಇದೇ ಬರುವ ಎಪ್ರಿಲ್ 24 ರಂದು ಪೋಷಕರು ಹೋಲಿ ಕಮಿನಿಯನ್ ನಡೆಸಲು ತಯಾರಿಯಲ್ಲಿದ್ದರು ಎನ್ನಲಾಗಿದೆ.
Mangalore Nine year old boy goes missing after coming from church, kidnap suspected in Ullal. Riyan is the boy found missing. Royal is said to be of class three. A missing case has been registered at Ullal police station. April 24th Riyan had his holy communion in the church.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm