ಬ್ರೇಕಿಂಗ್ ನ್ಯೂಸ್
13-04-22 05:20 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಚರ್ಚ್ ತೆರಳಿ ಮನೆಗೆ ವಾಪಾಸಾಗಿದ್ದ ಬಾಲಕ ಧಿಡೀರ್ ನಾಪತ್ತೆಯಾದ ಘಟನೆ ಉಳ್ಳಾಲ ಬೈಲಿನ ಗಣೇಶನಗರದಲ್ಲಿ ನಡೆದಿದೆ. ಬಾಲಕ ಅಪಹರಣಕ್ಕೀಡಾದ ಶಂಕೆ ವ್ಯಕ್ತವಾಗಿದ್ದು ಉಳ್ಳಾಲ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಉಳ್ಳಾಲ ಬೈಲು, ಗಣೇಶ ನಗರದ ಬಾಡಿಗೆ ಮನೆ ನಿವಾಸಿಗಳಾದ ಜಿತನ್ ರೆಸ್ಕಿನ್ಹಾ - ರೋಹಿತ ಬ್ರಾಕ್ಸ್ ದಂಪತಿಯ ಪ್ರಥಮ ಪುತ್ರ ರಿಯಾನ್ (9) ನಾಪತ್ತೆಯಾದ ಬಾಲಕ. ರಿಯಾನ್ ತೊಕ್ಕೊಟ್ಟು ಸಂತ ಸೆಬಾಸ್ಟಿಯನ್ ಶಾಲೆಯಲ್ಲಿ ಮೂರನೇ ತರಗತಿ ಮುಗಿಸಿದ್ದ. ರಿಯಾನ್ ಇಂದು ಬೆಳಗ್ಗೆ ಸ್ನೇಹಿತರೊಂದಿಗೆ ತೊಕ್ಕೊಟ್ಟು ಚರ್ಚ್ ತೆರಳಿದ್ದು ಮಧ್ಯಾಹ್ನ 1.35 ಗಂಟೆಗೆ ವಾಪಾಸಾಗಿದ್ದ. ಚರ್ಚಿನಿಂದ ವಾಪಸಾದ ರಿಯಾನ್ ಗಣೇಶ್ ನಗರದ ತನ್ನ ದೊಡ್ಡಮ್ಮನ ಮನೆಗೆ ತೆರಳಿದ್ದು ಅಲ್ಲಿದ್ದ ತಾಯಿ ತಮ್ಮ ಬಾಡಿಗೆ ಮನೆಯ ಕೀಲಿ ಕೈಯನ್ನ ರಿಯಾನಲ್ಲಿ ನೀಡಿ ಮನೆಗೆ ಹೋಗಲು ಹೇಳಿದ್ದಾರೆ. ರಿಯಾನ್ ತಾಯಿ ರೋಹಿತ ಅವರು 2 ಗಂಟೆ ಸುಮಾರಿಗೆ ಮನೆಗೆ ತೆರಳಿದಾಗ ಕಿಟಕಿಯಲ್ಲಿ ಮನೆಯ ಕೀಲಿ ಕೈ ಇದ್ದು ರಿಯಾನ್ ನಾಪತ್ತೆಯಾಗಿದ್ದಾನೆ. ಗಲಿ ಬಿಲಿಗೊಂಡ ರಿಯಾನ್ ಕುಟುಂಬಸ್ಥರು ಮತ್ತು ಸ್ಥಳೀಯರು ಬಾಲಕನಿಗಾಗಿ ಶೋಧ ನಡೆಸಿದ್ದಾರೆ.






ರಿಯಾನ್ 1.30 ಗಂಟೆಗೆ ಚರ್ಚಿಂದ ವಾಪಸಾದದ್ದನ್ನ ಸ್ಥಳೀಯರು ಗಮನಿಸಿದ್ದಾರೆ. ಘಟನೆಯ ಬಗ್ಗೆ ರಿಯಾನ್ ಪೋಷಕರು ಪೊಲೀಸರಿಗೆ ದೂರು ನೀಡಿದ್ದು ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಸ್ಥಳೀಯ ಮನೆಯೊಂದರ ಸಿಸಿಟಿವಿ ಪೂಟೇಜನ್ನ ಪರಿಶೀಲನೆ ನಡೆಸುತ್ತಿದ್ದಾರೆ.ರಿಯಾನ್ ಗೆ ಇದೇ ಬರುವ ಎಪ್ರಿಲ್ 24 ರಂದು ಪೋಷಕರು ಹೋಲಿ ಕಮಿನಿಯನ್ ನಡೆಸಲು ತಯಾರಿಯಲ್ಲಿದ್ದರು ಎನ್ನಲಾಗಿದೆ.
Mangalore Nine year old boy goes missing after coming from church, kidnap suspected in Ullal. Riyan is the boy found missing. Royal is said to be of class three. A missing case has been registered at Ullal police station. April 24th Riyan had his holy communion in the church.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am