ಬ್ರೇಕಿಂಗ್ ನ್ಯೂಸ್
13-04-22 08:56 pm Mangalore Correspondent ಕರಾವಳಿ
ಮಂಗಳೂರು, ಎ.13: ಸಿಎಂ ಬಸವರಾಜ ಬೊಮ್ಮಾಯಿ ಮಂಗಳವಾರ ಮಂಗಳೂರಿಗೆ ಬಂದಿದ್ದರು. ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಸಲು ಮುಖ್ಯಮಂತ್ರಿ ಬಂದಿದ್ದರು. ಇದೇ ವೇಳೆ, ಸಂಜೆ ಸಭೆ ಮುಗಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಸ್ಥಳೀಯ ಬಿಜೆಪಿ ಪ್ರಮುಖರು ಕರಾವಳಿಯ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕರೆದೊಯ್ದಿದ್ದಾರೆ.
ಪೊಳಲಿ ಉತ್ಸವದ ಕೊನೆಯ ದಿನದ ರಥೋತ್ಸವ ಮತ್ತು ಕೊನೆಯ ಚೆಂಡು ಉತ್ಸವ ಇದ್ದುದರಿಂದ ಭಾರೀ ಜನಸಂದಣಿ ಇತ್ತು. ಸಿಎಂ ಆಗಮನದ ಹಿನ್ನೆಲೆಯಲ್ಲಿ ಮೊದಲೇ ಕಿರಿದಾದ ರಸ್ತೆಯನ್ನು ಪೂರ್ತಿ ಬಂದ್ ಮಾಡಲಾಗಿತ್ತು. ಇದರಿಂದ ಜಿಟಿ ಜಿಟಿ ಮಳೆಯ ನಡುವೆ ಜನರು ತೀವ್ರ ಕಿರಿಕಿರಿ ಅನುಭವಿಸಿದ್ದಾರೆ. ಕೈಕಂಬದ ಪೊಳಲಿ ದ್ವಾರದಿಂದ ಅಡ್ಡೂರು- ಪೊಳಲಿ ಉದ್ದಕ್ಕೂ, ಇನ್ನೊಂದು ಕಡೆಯಿಂದ ಪೊಳಲಿ- ಬಿಸಿ ರೋಡ್ ರಸ್ತೆಯುದ್ದಕ್ಕೂ ವಾಹನಗಳು ಸಾಲುಗಟ್ಟಿದ್ದವು.
ಪೊಳಲಿ ಜಾತ್ರೆಯ ಕೊನೆಯ ದಿನದ ಉತ್ಸವಕ್ಕೆ ಸಾವಿರಾರು ಜನರು ಆಗಮಿಸುತ್ತಾರೆ. ಒಂದು ತಿಂಗಳ ಉತ್ಸವ ಆಗಿದ್ದರೂ, ಕಡೆ ಚೆಂಡು ಎನ್ನುವ ವಿಶೇಷತೆ ಇರುವುದರಿಂದ ಜನ ಸಂದಣಿಯೂ ಹೆಚ್ಚಿರುತ್ತದೆ. ಆದರೆ ಮುಖ್ಯಮಂತ್ರಿಯನ್ನೂ ಇದರ ಮಧ್ಯೆ ಕರೆತಂದಿದ್ದರಿಂದ ಸಾರ್ವಜನಿಕರು ತೀವ್ರ ಪರದಾಟ ಅನುಭವಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸೌರಜ್ ಮಂಗಳೂರು ವಿಡಿಯೋ ಮಾಡಿ ಫೇಸ್ಬುಕ್ ನಲ್ಲಿ ಹಂಚಿಕೊಂಡಿದ್ದಾರೆ. ಉತ್ಸವದ ಸಮಯದಲ್ಲಿ ಮುಖ್ಯಮಂತ್ರಿಯನ್ನು ಕರೆತಂದು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಾರೆ. ಸ್ಥಳೀಯ ಮುಖಂಡರು ಜನರ ಬಗ್ಗೆ ಕಾಳಜಿ ವಹಿಸಬೇಕಿತ್ತಲ್ಲಾ.. ಹೀಗೆ ರಾತ್ರಿ ಸಮಯದಲ್ಲಿ ಮುಖ್ಯಮಂತ್ರಿಯನ್ನು ಕರೆತಂದು ಜನರಿಗೆ ತೊಂದರೆ ಮಾಡಬೇಕಿತ್ತಾ.. ಇವರ ದಿಸೆಯಿಂದಾಗಿ ಎರಡು ಗಂಟೆ ಕಾಲ ರಸ್ತೆ ಮಧ್ಯೆ ಕಾಯುವಂತಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಸೌರಜ್ ಪ್ರಸ್ತಾಪಿಸಿದ ಪ್ರಶ್ನೆಗಳಿಗೆ ಬಹಳಷ್ಟು ಪ್ರಶಂಸೆ ಸಿಕ್ಕಿದ್ದು, ಜನರು ಹಿಡಿಶಾಪ ಹಾಕಿದ್ದಾರೆ. ಕೆಲವರು ಸೌರಜ್ ಬಳಸಿದ ಭಾಷೆಯ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಬೊಮ್ಮಾಯಿಯನ್ನು ಏಕವಚನದಲ್ಲಿ ನಿಂದಿಸಿದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಇನ್ನು ಕೆಲವರು ನಾಡಿನ ದೊರೆಯಾದ್ರೂ, ಸಾಮಾನ್ಯ ಜನರಾದ್ರೂ ಒಂದೇ.. ರಾತ್ರಿ ವೇಳೆ ಇಂತಹ ಸಂಕೀರ್ಣ ಜಾಗಕ್ಕೆ ಬಂದು ಟ್ರಾಫಿಕ್ ಅವ್ಯವಸ್ಥೆ ಮಾಡಬೇಕಿತ್ತಾ ಎಂದು ಕಾಲೆಳೆದಿದ್ದಾರೆ.
Mangalore Cm Bommai visit to Polali temple creates havoc among public as traffic blocked widely.
30-04-25 05:08 pm
Bangalore Correspondent
R Ahsok, Cm Siddaramaiah, Pak: ಕಾಂಗ್ರೆಸ್ನವರಿ...
29-04-25 10:45 pm
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
30-04-25 11:26 pm
Mangalore Correspondent
Kudupu Murder Case, SDPI, Ravindra Nayak: ಗುಂ...
30-04-25 11:07 pm
Nidhi Land Developers, Mangalore, Sky Garden:...
30-04-25 08:29 pm
Mangalore, Dinesh Gundurao, Kudupu Murder: ಕು...
30-04-25 04:06 pm
ಗುಂಪು ಥಳಿತಕ್ಕೆ ಸಾವು ಪ್ರಕರಣ ; ಕೇರಳ ಮೂಲದ ಯುವಕನೆ...
30-04-25 11:26 am
30-04-25 04:09 pm
Mangalore Correspondent
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am