ಬ್ರೇಕಿಂಗ್ ನ್ಯೂಸ್
13-04-22 10:33 pm Mangalore Correspondent ಕರಾವಳಿ
ಉಳ್ಳಾಲ, ಎ.13 : ಮನೆಯಿಂದ ಧಿಡೀರ್ ಕಾಣೆಯಾಗಿ ಮನೆಯವರನ್ನು ದಂಗುಬಡಿಸಿದ್ದ ಬಾಲಕ ಕೊನೆಗೆ ಹುಡುಕಾಟದ ಬಳಿಕ ಅಜ್ಜಿ ಮನೆಯಲ್ಲಿ ಪತ್ತೆಯಾಗಿದ್ದು ಪೊಲೀಸರು, ಪೋಷಕರು ಮತ್ತು ಸ್ಥಳೀಯರನ್ನು ಬೇಸ್ತು ಬೀಳಿಸಿದೆ.
ಉಳ್ಳಾಲ ಬೈಲು ಗಣೇಶನಗರದ ಬಾಡಿಗೆ ಮನೆ ನಿವಾಸಿಗಳಾದ ಜಿತನ್ ರೆಸ್ಕಿನ ಮತ್ತು ರೋಹಿತ ಬ್ರಾಕ್ಸ್ ದಂಪತಿಯ ಪುತ್ರ ರಿಯಾನ್ (9) ಇಂದು ಮಧ್ಯಾಹ್ನ ಧಿಡೀರ್ ನಾಪತ್ತೆಯಾಗಿದ್ದ. ಬೆಳಗ್ಗೆ ಸ್ನೇಹಿತರೊಂದಿಗೆ ತೊಕ್ಕೊಟ್ಟು ಚರ್ಚ್ ಗೆ ತೆರಳಿದ್ದು ಮಧ್ಯಾಹ್ನ ವಾಪಾಸಾಗಿದ್ದ. ಆಬಳಿಕ ಪಕ್ಕದಲ್ಲೇ ಇರುವ ದೊಡ್ಡಮ್ಮನ ಮನೆಗೆ ತೆರಳಿದ್ದು ಅಲ್ಲಿದ್ದ ರಿಯಾನ್ ತಾಯಿ ಮನೆಯ ಕೀಲಿ ಕೈ ಕೊಟ್ಟು ರಿಯಾನಲ್ಲಿ ಮನೆಗೆ ಹೋಗಲು ಹೇಳಿದ್ದರು. ಆದರೆ 2 ಗಂಟೆ ಸುಮಾರಿಗೆ ತಾಯಿ ಮನೆಗೆ ತೆರಳಿದಾಗ ಕಿಟಕಿಯಲ್ಲಿ ಮನೆಯ ಕೀಲಿ ಕೈ ಮಾತ್ರ ಇದ್ದು ರಿಯಾನ್ ನಾಪತ್ತೆಯಾಗಿದ್ದ. ಗಾಬರಿಗೊಂಡ ರಿಯಾನ್ ಪೋಷಕರು, ಸ್ಥಳೀಯರು ಶೋಧ ನಡೆಸಿದ್ದು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಸಿಸಿಟಿವಿ ಪೂಟೇಜ್ ಪರಿಶೀಲಿಸಿ ಶೋಧ ಕಾರ್ಯ ಆರಂಭಿಸಿದ್ದರು.

ಅಜ್ಜಿ ಮನೆ ತೋಟದಲ್ಲಿದ್ದ ಬಾಲಕ !
ಇತ್ತ ಮನೆಮಂದಿ ರಿಯಾನ್ ಹುಡುಕಾಟದಲ್ಲಿ ತೊಡಗಿದ್ದರೆ, ಸಂಜೆ ಹೊತ್ತಲ್ಲಿ ಪಾವೂರು ಗ್ರಾಮದ ಇನೋಳಿಯ ಮಜಿಕಟ್ಟ ಎಂಬಲ್ಲಿ ತನ್ನ ಅಜ್ಜಿ ಮನೆಯ ತೋಟದಲ್ಲಿ ರಿಯಾನ್ ಪತ್ತೆಯಾಗಿದ್ದಾನೆ. ಒಂಬತ್ತು ವರ್ಷದ ಹುಡುಗ ಒಬ್ಬಂಟಿಯಾಗಿಯೇ ತೊಕ್ಕೊಟ್ಟಿನಿಂದ ಸಿಟಿ ಬಸ್ಸೊಂದನ್ನ ಏರಿ ಇನೋಳಿಗೆ ತೆರಳಿದ್ದು ಅಲ್ಲಿನ ಮನೆಗೂ ಹೋಗದೆ ತೋಟದಲ್ಲಿ ಅಡಿಕೆ ಹೆಕ್ಕುತ್ತಿರುವಂತೆ ನಟಿಸಿದ್ದಾನೆ.
ಅಜ್ಜ , ಅಜ್ಜಿ ಸಾವನ್ನಪ್ಪಿದ್ದು ಮನೆಯಲ್ಲಿದ್ದ ಚಿಕ್ಕಮ್ಮನಿಗೆ ರಿಯಾನ್ ಬಂದ ವಿಚಾರ ತಡವಾಗಿ ತಿಳಿದುಬಂದಿತ್ತು. ರಿಯಾನ್ ನಾಪತ್ತೆ ಬಗ್ಗೆ ಜಾಲತಾಣದಲ್ಲಿ ಸಂದೇಶವನ್ನು ನೋಡಿದ ಚಿಕ್ಕಮ್ಮ ರಿಯಾನ್ ತಮ್ಮಲ್ಲಿ ಇರುವ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ. ಸಂಜೆ ರಿಯಾನ್ ಮತ್ತೆ ನಗು, ನಗುತ್ತಾ ತಾಯಿ ಮನೆಗೆ ಮರಳಿದ್ದು ಪೋಷಕರು, ಸ್ಥಳೀಯರು ನೆಮ್ಮದಿಯ ನಗು ಬೀರಿದ್ದಾರೆ.
ಬಾಲಕ ದಿಢೀರ್ ನಾಪತ್ತೆ ; ಉಳ್ಳಾಲದ ಮನೆಯಿಂದಲೇ ಅಪಹರಣ ಶಂಕೆ, ಪೊಲೀಸರಿಂದ ಶೋಧ ಕಾರ್ಯ
Ullal missing youth found in grannys house finally in Mangalore. The nine year old boy was found missing after he came back from the church.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am