ಬ್ರೇಕಿಂಗ್ ನ್ಯೂಸ್
18-04-22 04:32 pm Mangalore Correspondent ಕರಾವಳಿ
ಮಂಗಳೂರು, ಎ.18 : ಪ್ರೀತಿಸುತ್ತಿದ್ದ ಹುಡುಗಿ ತನ್ನನ್ನು ಪೀಡಿಸುತ್ತಿದ್ದಾಳೆ, ಆಕೆಯಿಂದ ಬಿಡುಗಡೆ ಕೊಡಿ ಎಂದು ಯುವಕನೊಬ್ಬ ಮೊಬೈಲ್ ಟವರ್ ಏರಿ ಪ್ರತಿಭಟನೆ ನಡೆಸಿದ ಘಟನೆ ಮಂಗಳೂರಿನ ಅಡ್ಯಾರ್ ನಲ್ಲಿ ನಡೆದಿದೆ. ಕೊಡ್ಮಣ್ ಎಂಬಲ್ಲಿನ ನಿವಾಸಿ ಸುಧೀರ್ (32) ಮೊಬೈಲ್ ಟವರ್ ಏರಿದ ಯುವಕ.
ಬೆಳಗ್ಗೆ ಒಂಬತ್ತು ಗಂಟೆ ಸುಮಾರಿಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಎದುರಲ್ಲಿ ಹೆದ್ದಾರಿ ಬದಿಯಲ್ಲೇ ಯುವಕ ಮೊಬೈಲ್ ಟವರ್ ಏರಿದ್ದು ಆತ್ಮಹತ್ಯೆ ಮಾಡಿಕೊಳ್ಳುತ್ತಾನೆಂದು ಸುದ್ದಿ ಹಬ್ಬಿತ್ತು. ಯುವಕ ಟವರ್ ಏರಿದ್ದನ್ನು ನೋಡಿ ಜನರು ಸೇರಿದ್ದು ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದಾರೆ. ಬಳಿಕ ಪೊಲೀಸರು ಜೋರು ಮಾಡಿ, ಆತನನ್ನು ಟವರ್ ನಿಂದ ಇಳಿಯಲು ಹೇಳಿದ್ದಾರೆ. ಅಲ್ಲಿಗೆ ಯುವತಿ ಕೂಡ ಬಂದಿದ್ದು ಪೊಲೀಸರು ಮಾತುಕತೆ ನಡೆಸಿದ್ದಾರೆ.




ಆನಂತರ ಯುವಕನ ಹೆತ್ತವರು, ಯುವತಿ ಹೆತ್ತವರು ಸ್ಥಳಕ್ಕೆ ಬಂದಿದ್ದು ಸಾರ್ವಜನಿಕರು ಸೇರಿ ಯುವಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.


ಇವರಿಬ್ಬರು ಐದು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಆದರೆ ಈ ನಡುವೆ ಯುವತಿಗೆ ಆರೋಗ್ಯ ತೊಂದರೆ ಇದೆಯೆಂದು ಹೇಳಿ ಆಕೆಯನ್ನು ಯುವಕ ನಿರಾಕರಿಸಿದ್ದ. ಆದರೆ ಯುವತಿ ಈ ಬಗ್ಗೆ ಪೊಲೀಸ್ ದೂರು ನೀಡಿದ್ದಳು. ಅಲ್ಲದೆ, ತನ್ನನ್ನೇ ಮದುವೆಯಾಗುವಂತೆ ಪೀಡಿಸಿದ್ದಳು. ಇದರಿಂದ ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದ ಯುವಕ ಮೊಬೈಲ್ ಟವರ್ ಏರಿ ವಿಚಿತ್ರ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾನೆ. ಯುವತಿ ಟವರ್ ಬಳಿ ಬಂದು ದೂರು ಹಿಂಪಡೆಯುತ್ತೇನೆಂದು ಹೇಳಿದ ಬಳಿಕ ಯುವಕ ಟವರ್ ನಿಂದ ಇಳಿದಿದ್ದಾನೆ ಎನ್ನಲಾಗುತ್ತಿದೆ.
In an incident like those in the movies, that occurred at Adyar on the outskirts of the city on Monday April 18, a youth who was distraught that his girlfriend had ditched him, scaled a mobile tower and threatened to kill himself. He did not budge to the repeated requests of fire service personnel and police asking him to come down.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am