ಬ್ರೇಕಿಂಗ್ ನ್ಯೂಸ್
20-04-22 10:21 pm Mangalore Correspondent ಕರಾವಳಿ
ಮಂಗಳೂರು ಎಪ್ರಿಲ್ 20 : ಹ್ಯಾಂಡ್ ಬ್ರೇಕ್ ಹಾಕಿ ಪಾರ್ಕ್ ಮಾಡಿದ್ದ ಬೃಹತ್ ಕಂಟೇನರ್ ಲಾರಿಯೊಂದು ಡ್ರೈವರ್ ಇಲ್ಲದೆ ಹಿಂದಕ್ಕೆ ಚಲಿಸಿದ ಘಟನೆ ತಲಪಾಡಿ ಟೋಲ್ ಗೇಟ್ ನಲ್ಲಿ ನಡೆದಿದ್ದು, ಟೋಲ್ ಸೆಕ್ಯುರಿಟಿ ಗಾರ್ಡ್ ಸಿಬಂದಿ ಸಹಿತ ಬೈಕಿನಲ್ಲಿ ತೆರಳುತ್ತಿದ್ದ ದಂಪತಿ ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ರಾತ್ರಿ ತಲಪಾಡಿ ಟೋಲ್ ಗೇಟ್ ಬಳಿ ಘಟನೆ ನಡೆದಿದೆ. ದೆಹಲಿಯಿಂದ ಕೊಚ್ಚಿಗೆ ತೆರಳುತ್ತಿದ್ದ ಗಣಪತಿ ಲಾಜಿಸ್ಟಿಕ್ಸ್ ಸಂಸ್ಥೆಗೆ ಸೇರಿದ ಕಂಟೇನರ್ ಲಾರಿಯನ್ನು ಚಾಲಕ ಜೈವೀರ್ ಸಿಂಗ್ (60) ತಲಪಾಡಿ ಟೋಲ್ ದಾಟಿ ರಸ್ತೆ ಬದಿ ನಿಲ್ಲಿಸಿದ್ದ. ಲಾರಿಯನ್ನು ಹ್ಯಾಂಡ್ ಬ್ರೇಕ್ ಹಾಕಿ ನಿಲ್ಲಿಸಿ ಕ್ಯಾಂಟೀನಲ್ಲಿ ಚಹಾ ಕುಡಿಯುತ್ತಿದ್ದಾಗ ಹ್ಯಾಂಡ್ ಬ್ರೇಕ್ ಕೈಕೊಟ್ಟು ಲಾರಿ ಡ್ರೈವರ್ ಇಲ್ಲದೆ ಹಿಂದಕ್ಕೆ ಚಲಿಸಿದೆ. ಲಾರಿ ಹಿಂದಕ್ಕೆ ಚಲಿಸುತ್ತಾ ಹೋಗಿ ರಿಕ್ಷಾ ಹಾಗೂ ಬೈಕ್ ಒಂದಕ್ಕೆ ಡಿಕ್ಕಿ ಹೊಡೆದಿದೆ. ಅಲ್ಲದೆ, ಟೋಲ್ ಗೇಟ್ನಲ್ಲಿರುವ ಸೆನ್ಸರ್ ಗೇಟ್ ಮತ್ತು ಸೆಕ್ಯುರಿಟಿ ಇರುತ್ತಿದ್ದ ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ನೂರು ಮೀಟರ್ ಉದ್ದಕ್ಕೆ ಇಳಿಜಾರಿನಲ್ಲಿ ಬಂದಿದ್ದು ವಾಹನಗಳು ಕಡಿಮೆ ಇದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ.
ಟೋಲ್ನಲ್ಲಿ ಕರ್ತವ್ಯದಲ್ಲಿದ್ದ ಸತೀಶ್ ನಾರ್ಲ ಪಡೀಲು, ಅಶೋಕ್ ಹಾಗೂ ಕೇರಳ ಕಡೆಗೆ ಸ್ಕೂಟರ್ನಲ್ಲಿ ತೆರಳುತ್ತಿದ್ದ ದಂಪತಿ ಲಾರಿಯು ಹಿಂದಕ್ಕೆ ಬರುವುದನ್ನು ನೋಡಿ ತಪ್ಪಿಸಿಕೊಂಡು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಒಂದು ಲಕ್ಷದಷ್ಟು ನಷ್ಟ ಆಗಿದೆ. ರಂಜಾನ್ ತಿಂಗಳಾದ್ದರಿಂದ ಹೆಚ್ಚು ವಾಹನಗಳು ಇರಲಿಲ್ಲ. ವಾಹನಗಳು ಇರುತ್ತಿದ್ದರೆ ಅಪಾಯ ಆಗುತ್ತಿತ್ತು ಎಂದು ಟೋಲ್ ಸಿಬಂದಿ ಹೇಳಿದ್ದಾರೆ.
A couple and a few staff had a miraculous escape after stationed container truck moved backwards and hit the toll gate structure at Talapady following technical problem in handbrake.It is gathered that the driver had parked the truck and been for tea. But, due to technical problem, the truck moved backwards for about a kilometre. The incident took place on reported on Tuesday night.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm