ಬ್ರೇಕಿಂಗ್ ನ್ಯೂಸ್
21-04-22 11:45 am Mangalore Correspondent ಕರಾವಳಿ
ಮಂಗಳೂರು, ಎ.21: 'ಒಂದು ದೇಶ, ಒಂದೇ ಜನ’ ಎಂಬ ಸಂದೇಶ ಹಿಡಿದು ತನ್ನ 21ನೇ ವಯಸ್ಸಿನಲ್ಲಿ ಏಕಾಂಗಿಯಾಗಿ ಬೈಕಿನಲ್ಲಿ ಭಾರತ ಪರ್ಯಟನೆ ಆರಂಭಿಸಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ನಿವಾಸಿ ಅಮೃತಾ ಜೋಶಿ 60 ದಿವಸಗಳ ಸಂಚಾರ ಪೂರೈಸಿದ್ದಾರೆ.
2022ರ ಫೆಬ್ರವರಿ 5ರಂದು ಕೇರಳದ ಕಲ್ಲಿಕೋಟೆಯಿಂದ ಸಂಚಾರ ಆರಂಭಿಸಿದ್ದ ಅಮೃತಾ ಜೋಶಿ ತಮಿಳುನಾಡು, ಆಂಧ್ರ ಪ್ರದೇಶ, ಒಡಿಸ್ಸಾ, ಪಶ್ಚಿಮ ಬಂಗಾಲ, ಅಸ್ಸಾಂ, ಮೇಘಾಲಯ, ತ್ರಿಪುರಾ, ಮಿಜೋರಾಂ, ಮಣಿಪುರ, ನಾಗಾಲ್ಯಾಂಡ್, ಅರುಣಾಚಲ ಪ್ರದೇಶ, ಸಿಕ್ಕಿಂ ರಾಜ್ಯಗಳನ್ನು ಸಂದರ್ಶಿಸಿದ್ದಾರೆ. ಈಶಾನ್ಯ ರಾಜ್ಯಗಳ ಭೇಟಿಯ ಜೊತೆಗೆ ನೆರೆಯ ಬಾಂಗ್ಲಾದೇಶ, ಮ್ಯಾನ್ಮಾರ್ಗಳನ್ನು ಕೂಡ ಅಮೃತಾ ಸಂದರ್ಶಿಸಿದ್ದಾರೆ. ಇದುವರೆಗೆ 8,040 ಕಿ.ಮೀ. ಯಾನ ಪೂರೈಸಿದ್ದಾಗಿ ಅಮೃತಾ ತಿಳಿಸಿದ್ದಾರೆ.
ಮುಂದೆ ನೇಪಾಳದಿಂದ ಆರಂಭಿಸಿ ಬಿಹಾರ, ಝಾರ್ಖಂಡ್, ಛತ್ತೀಸ್ಗಢ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಲಡಾಖ್, ಪಂಜಾಬ್, ಹರಿಯಾಣ, ದಿಲ್ಲಿ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಗೋವಾ, ಕರ್ನಾಟಕ ತಲುಪಲಿದ್ದು ಕೊನೆಯಲ್ಲಿ ಕೇರಳದ ಕಾಸರಗೋಡಿನಲ್ಲಿ ಯಾತ್ರೆಯನ್ನು ಮುಕ್ತಾಯ ಮಾಡಲಿದ್ದಾರೆ.
“ಸಿ.ಆರ್.ಎಫ್ ವುಮೆನ್ ಆನ್ ವೀಲ್ಸ್’ ಎಂಬ ಕ್ಲಬ್ ಸದಸ್ಯೆಯಾಗಿರುವ ಅಮೃತಾ ಜೋಶಿ ಕುಂಬಳೆ ನಿವಾಸಿಗಳಾದ ದಿ| ಅಶೋಕ್ ಜೋಶಿ ಮತ್ತು ಅನ್ನಪೂರ್ಣ ಜೋಶಿ ದಂಪತಿಯ ಕಿರಿಯ ಪುತ್ರಿ. ಅಮೃತಾ ಜೋಶಿ ದೇಶ ಸಂಚಾರಕ್ಕೆ ವಿವಿಧ ಸಂಘಟನೆಗಳ ಬೆಂಬಲವೂ ಸಿಕ್ಕಿದೆ.
ಈಶಾನ್ಯ ರಾಜ್ಯದ ಪ್ರಯಾಣದ ಬಗ್ಗೆ ಎಲ್ಲರೂ ಆ ರಾಜ್ಯಗಳು ಸುರಕ್ಷಿತವಲ್ಲ ಎಂದಿದ್ದರು. ಆದರೆ ಈ ಯಾನದ ಬಳಿಕ ಈಶಾನ್ಯ ರಾಜ್ಯಗಳು ಸುರಕ್ಷಿತ ಸ್ಥಳ ಮತ್ತು ಅಲ್ಲಿನ ಜನರು ಮೃದು ಮನಸ್ಸಿನವರು ಎಂದು ಹೇಳುತ್ತೇನೆ. ಅವರ ಪ್ರೀತಿ ಮತ್ತು ಬೆಂಬಲದಿಂದಾಗಿ ಇಡೀ ಭಾರತ ಯಾನವನ್ನು ಪೂರ್ಣಗೊಳಿಸಲು ನಿರ್ಧರಿಸಿದ್ದೇನೆ ಎಂದು ಅಮೃತಾ ಜೋಶಿ ಹೇಳಿದ್ದಾರೆ.
Youngest solo rider Amrutha Joshi from Kerala to cover northeast by bike.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 10:56 pm
HK News Desk
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
13-11-25 10:09 pm
Mangalore Correspondent
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm