ಬ್ರೇಕಿಂಗ್ ನ್ಯೂಸ್
24-09-20 03:01 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಹಿರಿಯ ಧಾರ್ಮಿಕ ಮುಖಂಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳ ಸಂಯುಕ್ತ ಖಾಝಿ ಆಗಿರುವ ಅಲ್ಹಾಜ್ ಪಿ.ಎಂ. ಇಬ್ರಾಹಿಂ ಮುಸ್ಲಿಯಾರ್ ಬೇಕಲ್ (71) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸುನ್ನಿ ಜಂಇಯ್ಯತುಲ್ ಉಲಮಾದ ರಾಜ್ಯಾಧ್ಯಕ್ಷರಾಗಿದ್ದ ಬೇಕಲ್ ಉಸ್ತಾದ್ ಅವರು, ಜಾಮಿಯಾ ಸಅದಿಯಾ ಅರಬಿಯಾ ಶರೀಅತ್ ಕಾಲೇಜಿನ ಪ್ರಾಚಾರ್ಯರು, ಸಮಸ್ತ ಉಲಮಾ ಒಕ್ಕೂಟದ ಕೇಂದ್ರ ಮುಶಾವರ ಸದಸ್ಯರಾಗಿ, ಅಲ್ ಅನ್ಸಾರ್ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಮೂಲತಃ ಬಂಟ್ವಾಳ ತಾಲೂಕಿನ ನರಿಂಗಾನ ನಿವಾಸಿಯಾಗಿರುವ ಮುಸ್ಲಿಯಾರ್, ದೇವಬಂದ್ ಅರೆಬಿಕ್ ಕಾಲೇಜಿನಿಂದ ಪದವಿ ಪಡೆದಿದ್ದರು. ಸೂರಿಂಜೆ ಮತ್ತು ಬಂಟ್ವಾಳದ ಮಸೀದಿಗಳಲ್ಲಿ ತಲಾ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಬಳಿಕ ಸುದೀರ್ಘ 43 ವರ್ಷಗಳಿಂದ ಬೇಕಲದಲ್ಲಿ ಮುದರ್ರಿಸ್ ಆಗಿ ಸೇವೆ ಸಲ್ಲಿಸುವ ಮೂಲಕ ‘ಬೇಕಲ್ ಉಸ್ತಾದ್’ ಎಂದೇ ಜನಪ್ರಿಯರಾಗಿದ್ದರು. ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಫೂಡಲ್ ಎಂಬಲ್ಲಿನ ಮುಹಮ್ಮದ್ ಮತ್ತು ಖದೀಜಾ ದಂಪತಿಯ ಪುತ್ರನಾಗಿ 1949ರಲ್ಲಿ ಜನಿಸಿದ್ದ ಅವರು ನರಿಂಗಾನ ಗ್ರಾಮದ ಡಿಜಿ ಕಟ್ಟೆಯ ಶಾಲೆಯಲ್ಲಿ 7ನೇ ತರಗತಿ ಕಲಿತ ಬಳಿಕ ಧಾರ್ಮಿಕ ಶಿಕ್ಷಣ ಕಲಿಯಲು ಆಸಕ್ತಿ ವಹಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸೇವೆಗೆ ‘ತಾಜುಲ್ ಫುಖಹಾಅ್’ ಎಂಬ ಬಿರುದು ಪಡೆದಿದ್ದಾರೆ. ಉಸ್ತಾದರು, ಕರ್ಮಶಾಸ್ತ್ರ, ಖಗೋಳಶಾಸ್ತ್ರದ ಬಗ್ಗೆ ಉನ್ನತ ಜ್ಞಾನ ಹೊಂದಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm