ಬ್ರೇಕಿಂಗ್ ನ್ಯೂಸ್
24-09-20 03:37 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಈಗ ಕನ್ನಡದ ಖ್ಯಾತ ನಟಿ ಕಂ ಆಂಕರ್ ಅನುಶ್ರೀಗೂ ಸುತ್ತಿಕೊಂಡಿದೆ. ಮಂಗಳೂರಿನಲ್ಲಿ ವಾರದ ಹಿಂದೆ ಬಂಧಿಸಲ್ಪಟ್ಟ ಕಿಶೋರ್ ಶೆಟ್ಟಿ ಸಂಪರ್ಕದಲ್ಲಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕಿಶೋರ್ ಶೆಟ್ಟಿ ಜೊತೆ ಸಂಪರ್ಕ ಇರುವ ಹಲವು ಯುವಕರು ಮತ್ತು ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ತರುಣ್ ಎಂಬಾತನನ್ನೂ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅನುಶ್ರೀ ಹೆಸರು ಹೇಳಿದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಆಕೆಯನ್ನು ವಿಚಾರಣೆ ನಡೆಸುವುದಕ್ಕಾಗಿ ಮಂಗಳೂರು ಪೊಲೀಸರು ನೋಟೀಸ್ ನೀಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲೇ ಕಿಶೋರ್ ಶೆಟ್ಟಿ ಬಂಧನ ಆಗಿತ್ತು. ಆತನ ಬಂಧನ ಆಗುತ್ತಿದ್ದಂತೆ ಮೊದಲಿಗೆ ಕನ್ನಡದ ನಿರೂಪಕಿಯ ಹೆಸರು ಕೇಳಿಬಂದಿತ್ತು. ಅನುಶ್ರೀ ಮತ್ತು ಅಕುಲ್ ಜೊತೆ ಕಿಶೋರ್ ಶೆಟ್ಟಿಗೆ ನಂಟು ಇದೆ ಎನ್ನುವ ವದಂತಿ ಹರಡಿತ್ತು. ಆದರೆ ಇದ್ಯಾವುದೂ ಕನ್ಫರ್ಮ್ ಆಗಿರಲಿಲ್ಲ. ಇದೀಗ ಮಂಗಳೂರು ಮೂಲದ ನಟಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರೇ ನೋಟೀಸ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮಕ್ಕೆ ಅನುಶ್ರೀ ತನಗೇನು ನೋಟೀಸ್ ಬಂದಿಲ್ಲ ಅಂತ ಉತ್ತರಿಸಿದ್ದಾರೆ.
ಕಿಶೋರ್ ಶೆಟ್ಟಿ ಮತ್ತು ಅಕಿಲ್ ನೌಶೀಲ್, ಡ್ರಗ್ ಪೆಡ್ಲರ್ ಆಗಿದ್ದು ಹಲವರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದರು. ಮಂಗಳೂರಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗ್ತಿತ್ತು. ಇದೀಗ ಅನುಶ್ರೀಗೆ ನೋಟೀಸ್ ನೀಡಿರುವ ಬಗ್ಗೆ ಮಂಗಳೂರು ಡಿಸಿಪಿ ವಿನಯ್ ಗಾಂವಕರ್ ಬಳಿ ಪ್ರಶ್ನೆ ಮಾಡಿದಾಗ ಪೋಲೀಸರು ನೋಟಿಸ್ ನೀಡಲು ಬೆಂಗಳೂರಿಗೆ ತೆರಳಿರುವುದಾಗಿ ತಿಳಿಸಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm