ಬ್ರೇಕಿಂಗ್ ನ್ಯೂಸ್
24-09-20 03:37 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 24: ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಈಗ ಕನ್ನಡದ ಖ್ಯಾತ ನಟಿ ಕಂ ಆಂಕರ್ ಅನುಶ್ರೀಗೂ ಸುತ್ತಿಕೊಂಡಿದೆ. ಮಂಗಳೂರಿನಲ್ಲಿ ವಾರದ ಹಿಂದೆ ಬಂಧಿಸಲ್ಪಟ್ಟ ಕಿಶೋರ್ ಶೆಟ್ಟಿ ಸಂಪರ್ಕದಲ್ಲಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರು ನೋಟೀಸ್ ನೀಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.
ಕಿಶೋರ್ ಶೆಟ್ಟಿ ಜೊತೆ ಸಂಪರ್ಕ ಇರುವ ಹಲವು ಯುವಕರು ಮತ್ತು ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ತರುಣ್ ಎಂಬಾತನನ್ನೂ ಪೊಲೀಸರು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಅನುಶ್ರೀ ಹೆಸರು ಹೇಳಿದ್ದಾನೆ ಎನ್ನಲಾಗುತ್ತಿದೆ. ಹೀಗಾಗಿ ಆಕೆಯನ್ನು ವಿಚಾರಣೆ ನಡೆಸುವುದಕ್ಕಾಗಿ ಮಂಗಳೂರು ಪೊಲೀಸರು ನೋಟೀಸ್ ನೀಡಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಲಿಂಕ್ ಹಿನ್ನೆಲೆಯಲ್ಲೇ ಕಿಶೋರ್ ಶೆಟ್ಟಿ ಬಂಧನ ಆಗಿತ್ತು. ಆತನ ಬಂಧನ ಆಗುತ್ತಿದ್ದಂತೆ ಮೊದಲಿಗೆ ಕನ್ನಡದ ನಿರೂಪಕಿಯ ಹೆಸರು ಕೇಳಿಬಂದಿತ್ತು. ಅನುಶ್ರೀ ಮತ್ತು ಅಕುಲ್ ಜೊತೆ ಕಿಶೋರ್ ಶೆಟ್ಟಿಗೆ ನಂಟು ಇದೆ ಎನ್ನುವ ವದಂತಿ ಹರಡಿತ್ತು. ಆದರೆ ಇದ್ಯಾವುದೂ ಕನ್ಫರ್ಮ್ ಆಗಿರಲಿಲ್ಲ. ಇದೀಗ ಮಂಗಳೂರು ಮೂಲದ ನಟಿ ಅನುಶ್ರೀಗೆ ಮಂಗಳೂರು ಸಿಸಿಬಿ ಪೊಲೀಸರೇ ನೋಟೀಸ್ ನೀಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪ್ರಶ್ನಿಸಿದ ಮಾಧ್ಯಮಕ್ಕೆ ಅನುಶ್ರೀ ತನಗೇನು ನೋಟೀಸ್ ಬಂದಿಲ್ಲ ಅಂತ ಉತ್ತರಿಸಿದ್ದಾರೆ.
ಕಿಶೋರ್ ಶೆಟ್ಟಿ ಮತ್ತು ಅಕಿಲ್ ನೌಶೀಲ್, ಡ್ರಗ್ ಪೆಡ್ಲರ್ ಆಗಿದ್ದು ಹಲವರಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದರು. ಮಂಗಳೂರಿನಲ್ಲಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂದು ಹೇಳಲಾಗ್ತಿತ್ತು. ಇದೀಗ ಅನುಶ್ರೀಗೆ ನೋಟೀಸ್ ನೀಡಿರುವ ಬಗ್ಗೆ ಮಂಗಳೂರು ಡಿಸಿಪಿ ವಿನಯ್ ಗಾಂವಕರ್ ಬಳಿ ಪ್ರಶ್ನೆ ಮಾಡಿದಾಗ ಪೋಲೀಸರು ನೋಟಿಸ್ ನೀಡಲು ಬೆಂಗಳೂರಿಗೆ ತೆರಳಿರುವುದಾಗಿ ತಿಳಿಸಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm